Webdunia - Bharat's app for daily news and videos

Install App

ಜಮೀರ್‌ಗೆ ಕುಳ್ಳ ಎಂದು ಯಾವತ್ತೂ ಕರೆದಿಲ್ಲ: ಕರಿಯಾ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು

Sampriya
ಶುಕ್ರವಾರ, 15 ನವೆಂಬರ್ 2024 (14:18 IST)
ಮೈಸೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರು ತಮ್ಮನ್ನು ಕರಿಯಾ ಎಂದು ಕರೆದಿರುವ ಬಗ್ಗೆ ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ  ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದ ವೇಳೆ ಜಮೀರ್ ಅವರು, ಕುಮಾರಸ್ವಾಮಿ ಅವರನ್ನು ಕರಿಯ ಎಂದು ಕರೆಯುವ ಮೂಲಕ ಕಪ್ಪು ವರ್ಣದ ಜನಾಂಗೀಯ ನಿಂದನೆ ಮಾಡಿದ್ದರು. ಬಳಿಕ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದ ಜಮೀರ್ ಅಹ್ಮದ್ ಖಾನ್, ಪ್ರೀತಿಯಿಂದ ಅವರು ನನ್ನನ್ನು 'ಕುಳ್ಳ' ಎಂದು ಕರೆಯುತ್ತಿದ್ದರು. ನಾನು ಅವರನ್ನು ಕರಿಯಣ್ಣ ಎಂದು ಕರೆಯುತ್ತಿದ್ದೆ. ನನ್ನ ಹೇಳಿಕೆಯಿಂದ ಜೆಡಿಎಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಜಮೀರ್ ಹೇಳಿದ್ದರು.

ಜಮೀರ್ ಹೇಳಿಕೆ ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಈ ಒಂದು ಹೇಳಿಕೆಯಿಂದ ಕಾಂಗ್ರೆಸ್ ಅಭ್ಯರ್ಥಿ ಸೋಲುವ ಸಾಧ್ಯತೆ ಇದೆ ಎನ್ನುವ ವಿಶ್ಲೇಷಣೆಗಳು ನಡೆಯುತ್ತಿವೆ. ಜಮೀರ್ ಹೇಳಿಕೆ ಬಗ್ಗೆ ಇದುವರೆಗೂ ಮೌನವಾಗಿದ್ದ ಕುಮಾರಸ್ವಾಮಿ ಇಂದು ಮೈಸೂರಿನಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಕುಳ್ಳ ಎನ್ನುವ ಸಂಸ್ಕೃತಿ ನನ್ನದಲ್ಲ ಎಂದು ತಿರುಗೇಟು ನೀಡಿದ್ದಾರೆ.

ಕುಳ್ಳ, ಕರಿಯ ಅನ್ನೋಕೆ, ನಾನು ಜಮೀರ್ ರೀತಿಯ ವಾತಾವರಣದಿಂದ ಬಂದಿಲ್ಲ. ಅವರ ಮಾತು ಅವರ ಸಂಸ್ಕೃತಿ ತೋರಿಸುತ್ತೆ. ಅವ್ರಿಗೆ ನಿಜಕ್ಕೂ ಮಾನ ಮರ್ಯಾದೆ ಇದಿಯಾ. ನಾವು ಈ ಹಿಂದೆ ಜೊತೆಯಾಗಿ ಇದ್ದಿದ್ದು ರಾಜಕೀಯವಾಗಿ ಮಾತ್ರ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments