ಬಿಎಸ್ ವೈ ಜಾಗಕ್ಕೆ ಹೊಸಮುಖದ ಅನ್ವೇಷಣೆಯಲ್ಲಿ ಹೈಕಮಾಂಡ್!

Webdunia
ಸೋಮವಾರ, 26 ಜುಲೈ 2021 (18:42 IST)

ಮುಖ್ಯಮಂತ್ರಿ ಸ್ಥಾನ ಅಲಂಕರಿಸಲು ಆರ್ ಎಸ್ ಎಸ್ ಮುಖಂಡ ಬಿಎಲ್ ಸಂತೋಷ್, ಮುರುಗೇಶ್ ನಿರಾಣಿ, ಲಕ್ಷ್ಮಣ್ ಸವದಿ, ಶ್ರೀರಾಮುಲು, ಅಶ್ವಥ್ ನಾರಾಯಣ, ಆರ್.ಅಶೋಕ್, ಅರವಿಂದ್ ಬೆಲ್ಲದ್, ಉಮೇಶ್ ಕತ್ತಿ, ಪ್ರಹ್ಲಾದ್ ಜೋಶಿ ಸೇರಿದಂತೆ ಹಲವರು ಪೈಪೋಟಿಗೆ ಇಳಿದಿದ್ದಾರೆ.

ಬಿಎಸ್ ವೈ ರಾಜೀನಾಮೆ ನೀಡುತ್ತಿದ್ದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತುರ್ತು ಸಭೆ ಕರೆದಿದ್ದು, ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತು ಚರ್ಚೆ ಆರಂಭಿಸಿದ್ದಾರೆ. ಇದೇ ವೇಳೆ ರಾಜ್ಯದ ಹಲವು ನಾಯಕರಿಗೆ ಬುಲಾವ್ ನೀಡಿದ್ದಾರೆ.

ಮುರುಗೇಶ್ ನಿರಾಣಿ, ಪ್ರಹ್ಲಾದ್ ಜೋಷಿ ಈಗಾಗಲೇ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ಬಿ.ಎಲ್. ಸಂತೋಷ್ ಅವರಿಗೆ ಹೈಕಮಾಂಡ್ ದೆಹಲಿಗೆ ಆಗಮಿಸುವಂತೆ ಸೂಚನೆ ನೀಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇದೇ ವೇಳೆ ಬಿಎಸ್ ವೈ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ರಹಿತ, ಕಳಂಕ ರಹಿತ ಹಾಗೂ ಹೊಸ ಮುಖದ ಹುಡುಕಾಟದಲ್ಲಿ ಹೈಕಮಾಂಡ್ ಇದ್ದು, ಅನಿರೀಕ್ಷಿತ ವ್ಯಕ್ತಿ ಸಿಎಂ ಸ್ಥಾನಕ್ಕೇರುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರುದ್ಯೋಗಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಸಿದ್ದರಾಮಯ್ಯ: ಬರೋಬ್ಬರಿ ಅರ್ಧ ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ

ಮಗು ಎತ್ತಿಕೊಂಡೇ ಮೂಟೆ ಹೊರುವ ಅಮ್ಮನ ಕಾಯಕಕ್ಕೆ: ಮನಕಲಕುವ ವಿಡಿಯೋ

1 ಲಕ್ಷ ಕೋಟಿಗೂ ಅಧಿಕ ಸಾಲ ಮಾಡಲು ಹೊರಟ ಸಿದ್ದರಾಮಯ್ಯ, ಇದೂ ದಾಖಲೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments