Webdunia - Bharat's app for daily news and videos

Install App

ಶಾಸಕ ಸ್ಥಾನಕ್ಕೆ ನೂತನ ಸಂಸದ ಬಸವರಾಜ ಬೊಮ್ಮಾಯಿ ರಾಜೀನಾಮೆ

Sampriya
ಶನಿವಾರ, 15 ಜೂನ್ 2024 (14:14 IST)
ಬೆಂಗಳೂರು:  ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.

ಮಾಜಿ ಮುಖ್ಯಮಂತ್ರಿಯೂ ಆಗಿರುವ  ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ರಾಜೀನಾಮೆ ಸಲ್ಲಿಕೆ ಮಾಡಿದರು.

ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ ನೀಡಿದರು. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಜಯಭೇರಿ ಬಾರಿಸಿದ್ದ ಬೊಮ್ಮಾಯಿ ಇದೇ ಮೊದಲ ಬಾರಿಗೆ ಲೋಕಸಭೆಗೆ ಸ್ಪರ್ಧಿಸಿ ವಿಜಯಿಯಾಗಿದ್ದಾರೆ.

ಎದುರಾಳಿಯಾಗಿ ಕಾಂಗ್ರೆಸ್ ಪಕ್ಷದಿಂದ ಕಣದಲ್ಲಿದ್ದ ಆನಂದಸ್ವಾಮಿ ಗಡ್ಡದೇವರಮಠ ವಿರುದ್ಧ ಅವರು ಗೆಲುವು ಸಾಧಿಸಿದ್ದಾರೆ. 7,05,538 ಮತಗಳನ್ನು ಪಡೆದಿದ್ದ ಬಸವರಾಜ ಬೊಮ್ಮಾಯಿ ಅವರು, 43,513 ವೋಟ್​ ಅಂತರದಿಂದ ಆನಂದಸ್ವಾಮಿ ಗಡ್ಡದೇವರಮಠ ವಿರುದ್ಧ ಜಯಿಸಿದ್ದರು. ಗಡ್ಡದೇವರಮಠ ಅವರು 6,62,025 ಮತ  ಪಡೆದಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments