Webdunia - Bharat's app for daily news and videos

Install App

ವಯನಾಡು ಉಪಚುನಾವಣೆ ಲಾಭಕ್ಕಾಗಿ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿತಾ ಕರ್ನಾಟಕ

Krishnaveni K
ಬುಧವಾರ, 13 ನವೆಂಬರ್ 2024 (11:06 IST)
Photo Credit: X
ಬೆಂಗಳೂರು: ವಯನಾಡಿನಲ್ಲಿ ಉಪಚುನಾವಣೆಯಲ್ಲಿ ತನ್ನ ಪಕ್ಷಕ್ಕೆ ಅನುಕೂಲ ಮಾಡಿಕೊಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಬಂಡೀಪುರ ಅರಣ್ಯಪ್ರದೇಶದಲ್ಲಿ ರಾತ್ರಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿತಾ ಎಂಬ ಅನುಮಾನ ಮೂಡಿದೆ.

ಬಂಡೀಪುರ ನಿಷೇಧಿತ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರಕ್ಕೆ ಅನುಮತಿ ನೀಡಿದರೆ ಇಲ್ಲಿನ ಪ್ರಾಣಿ ಸಂಕುಲಗಳಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ನಿಷೇಧ ಹೇರಲಾಗಿತ್ತು. ಕಳೆದ ಹದಿನೈದು ವರ್ಷದಿಂದ ಜಾರಿಯಲ್ಲಿ ನಿಷೇಧ ಹಿಂತೆಗೆಯುವುದಾಗಿ ಕರ್ನಾಟಕ ಸರ್ಕಾರದ ಹಿರಿಯ ನಾಯಕರೇ ಹೇಳಿಕೆ ನೀಡಿದ್ದಾರೆ.

ಇದರಿಂದ ವನ್ಯ ಜೀವಿಗಳಿಗೆ ತೊಂದರೆಯಾಗಲಿದೆ ಎಂಬುದು ತಜ್ಞರ ಆತಂಕವಾಗಿದೆ. ಆದರೆ ಇತ್ತೀಚೆಗೆ ವಯನಾಡು ಉಪಚುನಾವಣೆಯಲ್ಲಿ ಬಂಡೀಪುರ ಅರಣ್ಯಪ್ರದೇಶದ ನಡುವೆ ಹಾದುಹೋಗುವ ಹೆದ್ದಾರಿಯಲ್ಲಿ ರಾತ್ರಿ ನಿಷೇಧ ಹಿಂತೆಗೆಯುವ ವಿಚಾರ ಚರ್ಚೆಗೆ ಬಂದಿತ್ತು. ಇಲ್ಲಿ ರಾತ್ರಿ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂಬುದು ಕೇರಳಿಗರ ಆಗ್ರಹವಾಗಿತ್ತು.

ಇದೀಗ ವಯನಾಡು ಉಪಚುನಾವಣೆ ಸಂದರ್ಭದಲ್ಲಿ ತನ್ನ ಪಕ್ಷಕ್ಕೆ ಲಾಭ ಮಾಡಿಕೊಡುವ ಉದ್ದೇಶದಿಂದ ಕೇರಳದ ಬಹುದಿನಗಳ ಬೇಡಿಕೆಯನ್ನು ಕರ್ನಾಟಕ ಸರ್ಕಾರ ಈಡೇರಿಸಲು ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ರಕ್ಷಿತಾರಣ್ಯದ ನಡುವೆ ರಾಷ್ಟ್ರೀಯ ಹೆದ್ದಾರಿ ಸಾಗುತ್ತದೆ. ಇಲ್ಲಿ ರಾತ್ರಿ ವೇಗವಾಗಿ ಸಂಚರಿಸುವ ವಾಹನಗಳಿಗೆ ಸಿಲುಕಿ ಎಷ್ಟೋ ವನ್ಯ ಜೀವಿಗಳು ಸಾವನ್ನಪ್ಪಿದ್ದವು. ಹೀಗಾಗಿ ಈಗ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸಿದರೆ ಮತ್ತೆ ವನ್ಯ ಸಂಕುಲಕ್ಕೆ ಅಪಾಯವಾಗಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments