Webdunia - Bharat's app for daily news and videos

Install App

ಬೆಂಗಳೂರಿನಲ್ಲೂ ಶುರುವಾಯ್ತು ನಿಫಾ ವೈರಸ್ ಭೀತಿ

Krishnaveni K
ಬುಧವಾರ, 18 ಸೆಪ್ಟಂಬರ್ 2024 (09:47 IST)
ಬೆಂಗಳೂರು: ಕೇರಳದಲ್ಲಿ ಆತಂಕ ಸೃಷ್ಟಿಸಿರುವ ನಿಫಾ ವೈರಸ್ ಈಗ ಕರ್ನಾಟಕದ ರಾಜಧಾನಿ ಬೆಂಗಳೂರಿಗೂ ಹರಡುವ ಆತಂಕ ಎದುರಾಗಿದೆ. ಕೇರಳದಿಂದ ಬಂದವರಿಂದ ಬೆಂಗಳೂರಿನಲ್ಲಿ ನಿಫಾ ವೈರಸ್ ಹರಡುವ ಅಪಾಯ ಎದುರಾಗಿದೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ಓದುತ್ತಿರುವ ಕೇರಳ ಮೂಲದ ಕಾಲೇಜು ವಿದ್ಯಾರ್ಥಿ ತನ್ನ ಊರಿಗೆ ತೆರಳಿದ್ದಾಗ ನಿಫಾ ವೈರಸ್ ನಿಂದ ಮೃತಪಟ್ಟಿದ್ದ. ಈತನ ಸಂಪರ್ಕದಲ್ಲಿ ಹಲವು ಜನ ಬಂದಿರುವುದು ಖಚಿತವಾಗಿದೆ. ಹೀಗಾಗಿ ಈಗ ಬೆಂಗಳೂರಿನಲ್ಲೂ ನಿಫಾ ವೈರಸ್ ಹರಡುವ ಭೀತಿ ಎದುರಾಗಿದೆ.
  
ಕೇರಳದ ಯುವಕ ಸಾವನ್ನಪ್ಪಿದ್ದ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆ ಕರ್ನಾಟಕಕ್ಕೂ ಎಚ್ಚರವಾಗಿರಲು ಸೂಚಿಸಿದೆ. ಮೃತನ ಸಂಪರ್ಕಕ್ಕೆ ಬಂದವರು ಇದೀಗ ಪರೀಕ್ಷೆಗೊಳಪಡಲಿದ್ದಾರೆ. ಸೆಪ್ಟೆಂಬರ್ 8 ರಂದು ಯುವಕನ ಅಂತ್ಯ ಸಂಸ್ಕಾರಕ್ಕೆ ಬೆಂಗಳೂರಿನ ಆತನ ಸ್ನೇಹಿತರು ತೆರಳಿದ್ದರು.

ಇವರೆಲ್ಲರಿಗೂ ಈಗ ನಿಫಾ ಭೀತಿ ಎದುರಾಗಿದೆ. ಎಲ್ಲರನ್ನೂ ಪರೀಕ್ಷೆಗೊಳಪಡಲು ಆರೋಗ್ಯ ಇಲಾಖೆ ಸೂಚಿಸಿದೆ. ಇದಲ್ಲದೇ ಕೇರಳದಿಂದ ಕರ್ನಾಟಕಕ್ಕೆ ಬರುವವರ ಮೇಲೂ ವಿಶೇಷ ನಿಗಾ ಇಡಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಜ್ವರ, ಕೆಮ್ಮು, ತಲೆನೋವು, ವಾಂತಿ ಮುಂತಾದ ಲಕ್ಷಣಗಳು ಕಂಡುಬಂದರೆ ತಕ್ಷಣವೇ ಪರೀಕ್ಷಿಸಿಕೊಳ್ಳಲು ಸಲಹೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ಮುಂದಿನ ಸುದ್ದಿ
Show comments