Publish Date: Wed, 29 Mar 2023 (14:42 IST)
Updated Date: Wed, 29 Mar 2023 (14:32 IST)
ಬೆಳಗಾವಿ : ಕೇಂದ್ರ ಸಚಿವ ನಿತಿನ್ ಗಡ್ಕರಿಯವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಹಿಂಡಲಗಾ ಜೈಲಿನ ಕೈದಿಯನ್ನು ಮಹಾರಾಷ್ಟ್ರ ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.
ಜಯೇಶ್ ಕಾಂತಾ ಅಲಿಯಾಸ್ ಜಯೇಶ್ ಪೂಜಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾ.21ರಂದು ಮಹಾರಾಷ್ಟ್ರದ ನಾಗ್ಪುರದ ಸಚಿವರ ಕಚೇರಿಗೆ ಕರೆ ಮಾಡಿ ಕೈದಿಯ ಹೆಸರಿನಲ್ಲಿ ಜೀವ ಬೆದರಿಕೆ ಒಡ್ಡಲಾಗಿತ್ತು.
ಈ ಹಿಂದೆ ಸಹ ಜ.14ರಂದು ಸಚಿವರ ಕಚೇರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿ 10 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಹಿಂಡಲಗಾ ಜೈಲಿಗೆ ಭೇಟಿ ನೀಡಿ ಹಲವು ಬಾರಿ ತನಿಖೆ ನಡೆಸಿದ್ದರು.