Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ವಿನಾಯಿತಿ ಇರುವವರು ದಾಖಲೆ ಇಟ್ಟುಕೊಂಡು ಬರಬೇಕು. ವೀಕೆಂಡ್ ಲಾಕ್ಡೌನ್ ವೇಳೆ ನಗರ ಸಂಪೂರ್ಣ ಬಂದ್ ಆಗಲಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಕೊರೊನಾ ಹೆಚ್ಚಳ ಹಾಗೂ ಕರ್ನಾಟಕ ಸರ್ಕಾರದಿಂದ ಕೊವಿಡ್ ನಿಯಂತ್ರಣಕ್ಕೆ ಕಠಿಣ ನಿಯಮಾವಳಿಗಳ ಸೂಚನೆ ಹಿನ್ನೆಲೆ ಬಿಜೆಪಿ ಚಿಂತನಾ ಶಿಬಿರ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ನಂದಿ ಬೆಟ್ಟದಲ್ಲಿ ಜನವರಿ 7, 8, 9ರಂದು ನಿಗದಿಯಾಗಿದ್ದ ಸಭೆಯನ್ನು ಜನವರಿ 10ರ ಬಳಿಕ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಪರಿಷತ್ನ ನಿರ್ಗಮಿತ ಸದಸ್ಯರಿಗೆ ಬೀಳ್ಕೊಡುಗೆ ಸಮಾರಂಭ ನಡೆಸಲಾಗಿದೆ. ಅವಧಿ ಮುಗಿದರೂ ಸಾರ್ವಜನಿಕ ಜೀವನದಲ್ಲಿ ಇರುತ್ತಾರೆ. ರಾಜಕಾರಣದಲ್ಲಿ ಇದ್ದರೆ ಜನ ಮತ್ತೆ ಆಯ್ಕೆ ಮಾಡುತ್ತಾರೆ. ಕ್ರಿಯಾಶೀಲವಾಗಿದ್ದರೆ ಜನರ ಮನಸ್ಸಿನಲ್ಲಿ ಉಳಿಯುತ್ತೇವೆ. ಕ್ರಿಯಾಶೀಲವಾಗಿರುವುದು ಬಹಳ ಮುಖ್ಯ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಪರಿಷತ್ಗೆ ಹೊಸದಾಗಿ ಆಯ್ಕೆಯಾದವರಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಬೇರೆ ಬೇರೆ ರಂಗದಲ್ಲಿ ಹೊಸ ಅವಕಾಶ ಸಿಗಲಿ ಎಂದು ಹಾರೈಸಿದ್ದಾರೆ. ನಾಡುಕಟ್ಟಲು, ಕನ್ನಡಿಗರ ಬಾಳು ಹಸಿರುಮಾಡಲು ಕೈಜೋಡಿಸಿ ಎಂದು ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೇಳಿಕೊಂಡಿದ್ದಾರೆ.