Publish Date: Mon, 04 Apr 2022 (06:35 IST)
Updated Date: Mon, 04 Apr 2022 (06:57 IST)
ಬೆಂಗಳೂರು : ರಾಜಧಾನಿಯಲ್ಲಿ ಮೂಲಸೌಕರ್ಯ ವಿಚಾರದಲ್ಲಿ ಚಿಕ್ಕಪುಟ್ಟ ನ್ಯೂನತೆ ಇರಬಹುದು.
ಇದನ್ನು ಉದ್ಯಮಿಗಳು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಡಲಿ. ಅದನ್ನು ಬಿಟ್ಟು ಬೆದರಿಕೆ ಹಾಕುವ ಮಟ್ಟಕ್ಕೆ ಹೋಗಬಾರದು ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸ್ಟಾರ್ಟಪ್ ಸೇರಿದಂತೆ ಯಾವುದೇ ಉದ್ದಿಮೆಗಳಿಗೆ ಬೆಂಗಳೂರಿನಲ್ಲಿ ಇರುವಂತಹ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಜಾಗತಿಕ ಮಟ್ಟದಲ್ಲಿ ಎಲ್ಲಿಯೂ ಇಲ್ಲ. ಹೀಗಾಗಿಯೇ ಬೆಂಗಳೂರು ದೇಶದ ಸ್ಟಾರ್ಟಪ್ ರಾಜಧಾನಿ ಎನಿಸಿ ಕೊಂಡಿದೆ.
ನವೋದ್ಯಮಿಯೊಬ್ಬರು ಬೆಂಗಳೂರಿನಲ್ಲಿ ಮೂಲಸೌಕರ್ಯ ಕೊರತೆ ಇದೆ ಎಂದು ಟ್ವೀಟ್ ಮಾಡಿ, ಅಸಮಾಧಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಸಚಿವರು ಹೀಗೆಂದಿದ್ದಾರೆ.