Webdunia - Bharat's app for daily news and videos

Install App

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ನಾನ್ ವೆಜ್ ಊಟದ ಜಟಾಪಟಿ ನಿಲ್ಲುತ್ತಿಲ್ಲ

Krishnaveni K
ಗುರುವಾರ, 12 ಡಿಸೆಂಬರ್ 2024 (10:57 IST)
ಮಂಡ್ಯ: ಕಬ್ಬಿನ ನಾಡು ಮಂಡ್ಯದಲ್ಲಿ ನಡೆಯಲಿರುವ 87 ನೇ ಸಾಹಿತ್ಯ ಸಮ್ಮೇಳನದಲ್ಲಿ ಊಟದ ವಿಚಾರವಾಗಿ ಜಟಾಪಟಿ ಇನ್ನೂ ನಿಂತಿಲ್ಲ. ಇದೀಗ ಸಮ್ಮೇಳನದ ಅಧ್ಯಕ್ಷ ಗೊ.ರು. ಚೆನ್ನಬಸಪ್ಪ ಹೇಳಿಕೆ ನೀಡಿದ್ದಾರೆ.

87 ನೇ ಸಾಹಿತ್ಯ ಸಮ್ಮೇಳನದಲ್ಲಿ ಈ ಬಾರಿ ಮಾಂಸಾಹಾರ ಊಟ ಆಯೋಜಿಸುವ ವಿಚಾರವಾಗಿ ಪರ-ವಿರೋಧ ಚರ್ಚೆಯಾಗುತ್ತಿದೆ. ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಯಾಕೆ ಎಂದು ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದು, ಆಹಾರದ ವಿಚಾರದಲ್ಲಿ ಚರ್ಚೆ ಯಾಕೆ ಎಂದು ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಈ ಬಗ್ಗೆ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಗೊ ರು ಚೆನ್ನಬಸಪ್ಪ ಆಹಾರದ ವಿಚಾರದಲ್ಲಿ ಯಾವುದೇ ವಿವಾದ ಬೇಡ. ಯಾವ ರೀತಿ ಆಹಾರ ನೀಡಬೇಕು ಎಂಬುದನ್ನು ಆಹಾರ ಸಮಿತಿ ನಿರ್ಧರಿಸುತ್ತದೆ. ಅವರೇ ವ್ಯವಸ್ಥೆ ಮಾಡುವುದು. ಹೀಗಾಗಿ ಅದರಲ್ಲಿ ವಿವಾದ ಬೇಡ. ಇದು ಸಾಂಸ್ಕೃತಿ ಹಬ್ಬ ಎಂದು ಗೊ ರು ಚೆನ್ನಬಸಪ್ಪ ಹೇಳಿದ್ದಾರೆ.

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ, ಮದ್ಯ, ಧೂಮಪಾನ ನಿಷೇಧ ಹೇರಲಾಗಿದೆ. ಆದರೆ ಆಹಾರ ನಮ್ಮ ಹಕ್ಕು, ಆಹಾರ ಸಮಾನತೆ ಇರಬೇಕು. ಈ ಕಾರಣಕ್ಕೆ ಮಾಂಸಾಹಾರಕ್ಕೆ ಅವಕಾಶ ನೀಡಬೇಕು ಎಂದು ಕೆಲವರು ಅಭಿಯಾನವನ್ನೇ ಮಾಡುತ್ತಿದ್ದಾರೆ. ಬೇಳೆಯ ಜೊತೆ ಮೂಳೆಯೂ ಇರಲಿ ಎಂದು ಕೆಲವರು ವಾದ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments