Webdunia - Bharat's app for daily news and videos

Install App

ಕರ್ನಾಟಕ ಬಂದ್ ಗೆ ಕ್ಯಾರೇ ಇಲ್ಲ: ಬಂದ್ ಎಂದು ಕೂತ್ರೆ ನಮ್ಮ ಹೊಟ್ಟೆ ಪಾಡೇನು ಎಂದ ಜನ

Krishnaveni K
ಶನಿವಾರ, 22 ಮಾರ್ಚ್ 2025 (09:00 IST)
ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟ ವಿರೋಧಿಸಿ ಇಂದು ಕನ್ನಡ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಆದರೆ ಬಂದ್ ಗೆ ಜನ ಕ್ಯಾರೇ ಎಂದಿಲ್ಲ. ರಾಜ್ಯ ರಾಜಧಾನಿ ಸೇರಿದಂತೆ ಹಲವೆಡೆ ಜನಜೀವನ ಎಂದಿನಂತೆಯೇ ಇದೆ.

ಕರ್ನಾಟಕ ಬಂದ್ ಗೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ನೀರಸ ಪ್ರತಿಕ್ರಿಯೆ ಕಂಡುಬಂದಿದೆ. ಬೆಳಿಗ್ಗೆಯಿಂದಲೇ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಗಳು ಎಂದಿನಂತೆ ಓಡಾಟ ನಡೆಸುತ್ತಿದೆ. ಜನರೂ ಸಹಜವಾಗಿ ತಮ್ಮ ಕೆಲಸಗಳತ್ತ ಸಾಗುತ್ತಿದ್ದಾರೆ.

ಇನ್ನು ಕೆಲವೆಡೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬಹುತೇಕ ಶಾಲೆಗಳು ಎಂದಿನಂತೆ ನಡೆಯುತ್ತಿವೆ. ಪರೀಕ್ಷೆಗಳನ್ನೂ ಮುಂದೂಡಲಾಗಿಲ್ಲ. ಬಂದ್ ಗೆ ಓಲಾ, ಉಬರ್ ಸೇರಿದಂತೆ ಆಟೋ, ಕ್ಯಾಬ್ ಗಳೂ ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಬಂದ್ ಎಂದು ಮನೆಯಲ್ಲಿಯೇ ಕೂತರೆ ನಮ್ಮ ಹೊಟ್ಟೆ ಪಾಡೇನು ಎಂದು ವ್ಯಾಪಾರಿಗಳು ಪ್ರಶ್ನೆ ಮಾಡಿದ್ದಾರೆ.

ಇನ್ನು, ಬಂದ್ ಗೆ ಚಿತ್ರರಂಗ ಬೆಂಬಲ ಘೋಷಿಸಿರುವ ಕಾರಣಕ್ಕೆ ಇಂದು ಥಿಯೇಟರ್ ಗಳಲ್ಲಿ ಸಿನಿಮಾ ಪ್ರದರ್ಶನವಿರಲ್ಲ. ಕೆಲವೆಡೆ ಕನ್ನಡ ಹೋರಾಟಗಾರರು ಅಂಗಡಿ ಮುಚ್ಚಿ ಬಂದ್ ಗೆ ಸಹಕರಿಸಿ ಎಂದು ಮನವಿ ಮಾಡುತ್ತಿದ್ದ ದೃಶ್ಯ ಕಂಡುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments