Webdunia - Bharat's app for daily news and videos

Install App

ಬಿವೈ ವಿಜಯೇಂದ್ರ ಜೊತೆ ಆರ್ ಅಶೋಕ್ ಸ್ಥಾನಕ್ಕೂ ಕಂಟಕ

Krishnaveni K
ಮಂಗಳವಾರ, 4 ಫೆಬ್ರವರಿ 2025 (13:50 IST)
ಬೆಂಗಳೂರು: ಬಿಜೆಪಿ ಬಣ ರಾಜಕೀಯ ಈಗ ದೆಹಲಿ ಅಂಗಳಕ್ಕೆ ತಲುಪಿದೆ. ಬಿವೈ ವಿಜಯೇಂದ್ರ ಜೊತೆ ಈಗ ಆರ್ ಅಶೋಕ್ ಸ್ಥಾನಕ್ಕೂ ಕುತ್ತು ಬಂದಿದೆ ಎನ್ನಲಾಗಿದೆ.

ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಬಿಜೆಪಿಯ ಬಂಡಾಯ ಬಣ ಈಗ ಬಿಜೆಪಿ ಹೈಕಮಾಂಡ್ ಜೊತೆ ನಿರಂತರವಾಗಿ ಮಾತುಕತೆ ನಡೆಸುತ್ತಿದೆ. ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ಕುಟುಂಬದ ಮುಷ್ಠಿಯಲ್ಲಿ ಬಿಜೆಪಿಯಿದೆ. ಇದು ಬದಲಾಗಬೇಕು, ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಬೇಕು ಎಂದು ಯತ್ನಾಳ್ ಬಣ ಒತ್ತಡ ಹೇರುತ್ತಿದೆ.

ಇದರ ಜೊತೆಗೆ ವಿಪಕ್ಷ ನಾಯಕ ಸ್ಥಾನವನ್ನೂ ಬದಲಾಯಿಸುವಂತೆ ಯತ್ನಾಳ್ ಬಣ ಪಟ್ಟಿ ಕೊಟ್ಟಿದೆ ಎನ್ನಲಾಗಿದೆ. ಹೀಗಾಗಿ ವಿಜಯೇಂದ್ರ ಜೊತೆ ಅಶೋಕ್ ಸ್ಥಾನಕ್ಕೂ ಕುತ್ತು ಬಂದಿದೆ ಎನ್ನಬಹುದು. ಇಂದು ಯತ್ನಾಳ್ ಮತ್ತು ಟೀಂ ದೆಹಲಿಗೆ ತೆರಳಲಿದ್ದು ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವಂತೆ ಮತ್ತೆ ಒತ್ತಾಯ ಹೇರಲಿದ್ದಾರೆ.

ಒಂದು ವೇಳೆ ಬಂಡಾಯ ನಾಯಕರ ಮಾತಿಗೆ ಹೈಕಮಾಂಡ್ ಒಪ್ಪಿಗೆ ನೀಡಿದರೆ ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಸಂಪೂರ್ಣ ಬದಲಾವಣೆಯಾಗಲಿದೆ. ಆದರೆ ಇದರಿಂದ ಯಡಿಯೂರಪ್ಪ ಆಪ್ತರ ಅಸಮಾಧಾನ ಹೆಚ್ಚಲಿದೆ. ಹೀಗಾಗಿ ಹೈಕಮಾಂಡ್ ಈಗ ಎಚ್ಚರಿಕೆ ನಡೆ ಇಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments