ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಎದುರಾಗಿದೆ ಒಂದು ಅಡ್ಡಿ

Krishnaveni K
ಬುಧವಾರ, 7 ಜನವರಿ 2026 (09:04 IST)
ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಚರ್ಚೆ ನಡೆಸಲು ಮುಂದಾಗಿರುವ ನಾಯಕರಿಗೆ ಈಗ ಒಂದು ಅಡ್ಡಿ ಎದುರಾಗಿದೆ. ಅದೇನೆಂದು ಇಲ್ಲಿದೆ ನೋಡಿ  ವಿವರ.

ಸಂಕ್ರಾಂತಿ ವೇಳೆಗೆ ರಾಜ್ಯ ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್  ಬುಲಾವ್ ನೀಡಿ ಮಾತುಕತೆ ನಡೆಸಬಹುದು ಎಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬಣ ಕಾಯುತ್ತಿದೆ. ಈ ಹಿಂದೆ ಹೊಸ ವರ್ಷದ ಸಂದರ್ಭದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿದೇಶ ಯಾತ್ರೆಯಿಂದಾಗಿ ಮಾತುಕತೆ ಮುಂದೂಡಿಕೆಯಾಗಿದೆ ಎನ್ನಲಾಗಿತ್ತು.

ಆದರೆ ಈಗ ಸೋನಿಯಾ ಗಾಂಧಿ ಭಾರತದಲ್ಲಿದ್ದರೂ ಅವರಿಗೆ ಅನಾರೋಗ್ಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗಿನ ದಿನಗಳಲ್ಲಿ ಸೋನಿಯಾ ಗಾಂಧಿಗೆ ಪದೇ ಪದೇ ಅನಾರೋಗ್ಯ ಸಮಸ್ಯೆ ಕಾಡುತ್ತಿದೆ. ಇದೀಗ ಅವರು ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸದ್ಯಕ್ಕೆ ಅವರು ಅನಾರೋಗ್ಯಕ್ಕೀಡಾಗಿರುವುದರಿಂದ ಮತ್ತೆ ರಾಜ್ಯ ರಾಜಕೀಯ ಚಟುವಟಿಕೆಗಳು ಮುಂದೂಡಿಕೆಯಾಗಲಿವೆ. ಸೋನಿಯಾ ಚೇತರಿಸಿಕೊಂಡ ಬಳಿಕವಷ್ಟೇ ರಾಜ್ಯದಲ್ಲಿ ಅಧಿಕಾರ ಹಂಚಿಕೆ ಅಥವಾ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ವಿರುದ್ಧ ಹೀನಾಯ ಹೇಳಿಕೆ, ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್‌ಗೆ ಒತ್ತಾಯ

ನನಗೂ ಐಪಿಎಲ್‌ ಟಿಕೆಟ್ ಬೇಡ, ಬೇರೆಯವರಿಗೂ ಕೊಡುವುದಿಲ್ಲ: ಸುರೇಶ್ ಕುಮಾರ್ ಗರಂ

ಅವರು ಮಾಡಿರೋ ತೊಂದರೆ ಮುಚ್ಚಿಕೊಳ್ಳುತ್ತಿದ್ದಾರೆ: ಡಿಕೆ ಶಿವಕುಮಾರ್‌

ಕೇರಳದಲ್ಲಿ ಬಿಜೆಪಿ-ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುತ್ತದೆ: ಪ್ರಧಾನಿ ಮೋದಿ

ಬೇಸಿಗೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ಬೆಂಗಳೂರು ಕಾನ್ಪುರಕ್ಕೆ ವಿಶೇಷ ರೈಲು

ಮುಂದಿನ ಸುದ್ದಿ
Show comments