Webdunia - Bharat's app for daily news and videos

Install App

ರೈತರಿಗೆ ನೋಟಿಸ್‌ ಕೊಟ್ಟ ಅಧಿಕಾರಿಗಳನ್ನು ಜೈಲಿಗೆ ಹಾಕಬೇಕು: ಆರ್‌ ಅಶೋಕ್‌ ಆಕ್ರೋಶ

Sampriya
ಸೋಮವಾರ, 2 ಡಿಸೆಂಬರ್ 2024 (17:32 IST)
ಮೈಸೂರು: ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ವಕ್ಫ್‌ ಬೋರ್ಡ್‌ ಬಡವರ ಜಮೀನು   ನುಂಗುತ್ತಿದೆ.  ಅಲ್ಪಸಂಖ್ಯಾತರ ಓಲೈಕೆ ಮಾಡುತ್ತ ಬಹುಸಂಖ್ಯಾತರನ್ನು ನಿರ್ಲಕ್ಷ್ಯ ಮಾಡಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟರೇ ಸರ್ಕಾರವೇ ಹೊಣೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್‌ ಎಚ್ಚರಿಸಿದರು.

ಮೈಸೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಮೈಸೂರಿನ ಮುನೇಶ್ವರ ನಗರ ಮುಲ್ಲಾ ನಗರವಾಗಿ ಬದಲಾಗಿದ್ದು, ಇಲ್ಲಿನ ಬಸವಣ್ಣನ ಮಠದ ಆಸ್ತಿಯನ್ನೂ ವಕ್ಫ್‌ ನುಂಗುತ್ತಿದೆ. ದೇಗುಲ, ಮಠ, ಶ್ರೀಸಾಮಾನ್ಯರ ಆಸ್ತಿಗೆ ಕಿಂಚಿತ್ತು ಧಕ್ಕೆಯಾದರೆ ಹೋರಾಟ ತೀವ್ರ ಸ್ವರೂಪ ಪಡೆಯುತ್ತದೆ ಎಂದು ಎಚ್ಚರಿಸಿದರು.

ಮನಮೋಹನ್ ಸಿಂಗ್‌ ಕಾಲದಲ್ಲಿ ಜಾರಿಗೊಂಡ ವಕ್ಫ್‌ ಕಾಯ್ದೆಗೆ ಕೇಂದ್ರ ಎನ್‌ಡಿಎ ಸರ್ಕಾರ ತಿದ್ದುಪಡಿ ತರುತ್ತಿದ್ದು, ಆದಷ್ಟು ಶೀಘ್ರ ಇದನ್ನು ಜಾರಿಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕೆಲವು ಅಧಿಕಾರಿಗಳು ನೋಟಿಸ್ ಕೊಟ್ಟಿರಬಹುದು. ಆದರೆ ರೈತರಿಗೆ ಬೆದರಿಸುವ ಧೈರ್ಯ ಮಾಡಿರಲಿಲ್ಲ. ಆದರೆ ಸಚಿವ ಜಮೀರ್‌ ವರು ಸಿದ್ದರಾಮಯ್ಯ ಹೆಸರು ಹೇಳಿಕೊಂಡು ಅಧಿಕಾರಿಗಳನ್ನು ಬೆದರಿಸಿ, ಜಿಲ್ಲೆಗೊಂದು ಸಭೆ ನಡೆಸಿ ವಕ್ಫ್‌ ಆಸ್ತಿ ಎಂದು ದಾಖಲೆ ಬದಲಿಸಿದ್ದಾರೆ. ರೈತರಿಗೆ ನೋಟಿಸ್‌ ಕೊಟ್ಟ ಅಧಿಕಾರಿಗಳನ್ನು ಜೈಲಿಗೆ ಹಾಕಬೇಕು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments