ಒಂದೂವರೆ ವರ್ಷದ ಬಳಿಕ ಒಂದಾದ ಗುರು ಶಿಷ್ಯರು!

Webdunia
ಶುಕ್ರವಾರ, 13 ಆಗಸ್ಟ್ 2021 (21:22 IST)
ಒಂದು ಕಾಲದಲ್ಲಿ ಗುರು- ಶಿಷ್ಯರಾಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಸಚಿವ ಎಂಟಿಬಿ ನಾಗರಾಜ್ ರಾಜಕಾರಣದ ಚದುರಂಗ ಆಟದಿಂದ ದೂರವಾಗಿದ್ದು, ಎರಡು ವರ್ಷಗಳ ಬಳಿಕ ಒಂದಾಗಿದ್ದಾರೆ.
ಹೀಗೆ ಒಂದೇ ಟೇಬಲ್ ನಲ್ಲಿ ಅಕ್ಕಪಕ್ಕ ಕುಳಿತ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಸಚಿವ ಎಂಟಿಬಿ ನಾಗರಾಜ್ ನಾಟಿ ಕೋಳಿ ಸಾರಿನ ರುಚಿ ಸವೆದದ್ದು ಬೆಂಗಳೂರು ಗ್ರಾಮಾಂತರ ಹೊಸಕೋಟೆಯಲ್ಲಿ. ಇಂದು ಹೊಸಕೋಟೆ ಪಟ್ಟಣದ ಕನಕ ನಗರದಲ್ಲಿ ಕನಕ ಸಮೃದ್ದ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಉದ್ಘಾಟನ ಕಾರ್ಯಕ್ರಮಕ್ಕು ಮುನ್ನ ಕಾಂಗ್ರೆಸ್ ಮುಖಂಡರೊಬ್ಬರ ಮನೆಯಲ್ಲಿ ಇಬ್ಬರು ಒಟ್ಟಾಗಿ ಕುಳಿತು ರಾಗಿ ಮುದ್ದೆ, ನಾಟಿ ಕೋಳಿ ಸಾರಿನ ಊಟ ಮಾಡಿದರು.
ಕಳೆದ ಎರಡು ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದಿಂದ ಹೊರಬಂದ ಎಂಟಿಬಿ ನಾಗರಾಜ್ ಬಿಜೆಪಿ ಪಕ್ಷ ಸೇರಿದ ಮೇಲೆ 2019 ರ ಉಪ ಚುನಾವಣೆ ರಾಜಕೀಯ ವೇದಿಕೆಗಳಲ್ಲಿ ಎಂಟಿಬಿ ನಾಗರಾಜ್ ತೀವ್ರವಾಗಿ ವಾಗ್ದಾಳಿ ನಡೆಸಿದ್ರು, ಅದಾದ ಬಳಿಕ ಇಂದು ಹೊಸಕೋಟೆಯಲ್ಲಿ ಕನಕ ಸಮೃದ್ದಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉದ್ಘಾಟನ ಕಾರ್ಯಕ್ರಮದಲ್ಲಿ ಒಟ್ಟಾಗಿ ಭಾಗವಹಿಸಿ ಇಬ್ಬರು ತಮ್ಮ ಪಾಡಿಗೆ ತಾವು ವಾಪಸ್ಸಾಗಿದ್ದಾರೆ.
ಒಟ್ಟಾರೆ ಸೊಸೈಟಿ ಉದ್ಘಾಟನ ಕಾರ್ಯಕ್ರಮದಲ್ಲಿ ಗುರು ಶಿಷ್ಯರಾದ ಸಿದ್ದು ಹಾಗೂ ಎಂಟಿಬಿ ಸುಮ್ಮನಿದ್ದರು ಅವರ ಬೆಂಬಲಿಗರು ಮಾತ್ರ ತಮ್ಮ ನಾಯಕರುಗಳ ಬಗ್ಗೆ ಘೋಷಣೆಗಳನ್ನು ಕೂಗಿದ್ದು ಮಾತ್ರ ಕೀಳು ಮಟ್ಟದ ರಾಜಕೀಯ ತೋರುವಂತಿತ್ತು.
congress

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಬಾಸ್ ಖಮೇನಿ ಕೊಲ್ಲಲು ಹೇಳಿಕೊಟ್ಟಿದ್ದು ಮೋದಿಯೇ: ಭಾರತೀಯ ಬಾಲಕನ ಮಾತು ಕೇಳಿದ್ರೆ ಶಾಕ್ ಆಗ್ತೀರಿ Video

ಭಾರತದ ದಾಳಿಯಿಂದಲೇ ಇನ್ನೂ ಎದ್ದಿಲ್ಲ, ಆಗಲೇ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದ ವಾಯುನೆಲೆ ಮೇಲೆ ದಾಳಿ

ಇದೆಂಥಾ ಅಸಹ್ಯ.. ಸ್ವೀಟ್ ಖರೀದಿ ಮಾಡುವವರು ಈ ವಿಡಿಯೋ ತಪ್ಪದೇ ನೋಡಿ

ಗ್ಯಾರಂಟಿ ಯೋಜನೆ ನೀವೇ ಬೇಡ ಹೇಳಿ: ಸಚಿವ ಎಂಬಿ ಪಾಟೀಲ್ ರಿಕ್ವೆಸ್ಟ್

ಮುಂದಿನ ಸುದ್ದಿ
Show comments