Webdunia - Bharat's app for daily news and videos

Install App

ಕುರ್ಚಿ ಉಳಿಸಿಕೊಳ್ಳಲು ಆಪರೇಷನ್ ಕಮಲ ಆಡಿಯೋ ರಿಲೀಸ್ ಮಾಡಿದೆ - ಸಿಎಂ ಕುಮಾರಸ್ವಾಮಿ

Webdunia
ಬುಧವಾರ, 13 ಫೆಬ್ರವರಿ 2019 (08:01 IST)
ಬೆಂಗಳೂರು : ನಾವೇನು ಸನ್ಯಾಸಿಗಳಲ್ಲ. ಕುರ್ಚಿ ಉಳಿಸಿಕೊಳ್ಳಲು ಆಪರೇಷನ್ ಕಮಲದ  ಆಡಿಯೋವನ್ನು ಪತ್ರಿಕಾಗೋಷ್ಠಿ ನಡೆಸಿ ರಿಲೀಸ್ ಮಾಡಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.


ಸದನದಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ‘ಸಿಎಂ ಕುಮಾರಸ್ವಾಮಿ ಅವರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿ ಸ್ಪೀಕರ್ ಅವರನ್ನು ಬೀದಿಗೆ ತಂದಿದ್ದಾರೆ’ ಎಂದು ಆರೋಪಿಸಿದರು.


ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಅವರು, ‘ಬಿಜೆಪಿ ನಾಯಕರು ಪದೇ ಪದೇ ಆಪರೇಷನ್ ಕಮಲ ನಡೆಯುತ್ತಿಲ್ಲ ಎಂದು ಹೇಳುತ್ತಿದ್ದರು. ಅಲ್ಲದೇ ಸರ್ಕಾರ ಉರುಳಿದರೆ ನಾವೇನು ಸುಮ್ಮನೆ ಕೂರಲು ಸನ್ಯಾಸಿಗಳಲ್ಲ ಎಂದು ಹೇಳುತ್ತಿದ್ದರು. ಹಾಗೆಯೇ ನಾವು ಕೂಡ ಸನ್ಯಾಸಿಗಳು ಅಲ್ಲ. ನಮ್ಮ ಕುರ್ಚಿಯನ್ನು ಉಳಿಸಿಕೊಳ್ಳಲು ನಾವು ಪ್ರತಿಕಾಗೋಷ್ಠಿ ನಡೆಸಿ ಈ ಆಡಿಯೋ ರೆಕಾರ್ಡ್ ಬಿಡುಗಡೆ ಮಾಡಿದ್ದೇವೆ ಅಷ್ಟೇ’ ಎಂದು ಎಚ್‍ಡಿಕೆ ತಿರುಗೇಟು ನೀಡಿದ್ದಾರೆ.


ಹಾಗೇ ‘ಏನೂ ತಪ್ಪು ಮಾಡಿಲ್ಲ ಅಂದರೆ ಬಿಜೆಪಿಯವರಿಗೆ ಭಯ ಏಕೆ ಎಂದು ಪ್ರಶ್ನಿಸಿದ ಸಿಎಂ ಕುಮಾರಸ್ವಾಮಿ ಅವರು, ಸತ್ಯವನ್ನ ಜನರಿಗೆ ತೋರಿಸಬೇಕಿತ್ತಲ್ವಾ? ಅದಕ್ಕೆ ಆಡಿಯೋ ನೀಡಿದೆ. ಸ್ಪೀಕರ್ ಹೆಸರನ್ನು ಬೀದಿಗೆ ತಂದಿದ್ದು ಯಾರು? ಎನ್ನುವುದನ್ನು ಅವರೇ ಯೋಚನೆ ಮಾಡಲಿ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments