ಸದನದಲ್ಲಿ ಸ್ವಾರಸ್ಯಕರ ಚರ್ಚೆ: ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಪಿಶಾಚಿ ಅಂತೆ...!

Webdunia
ಗುರುವಾರ, 16 ನವೆಂಬರ್ 2017 (16:41 IST)
ವಿಧಾನಸಭೆಯಲ್ಲಿ ನಡೆದ ಮೌಢ್ಯ ಪ್ರತಿಬಂಧಕ ಮಸೂದೆ ಜಾರಿ ಚರ್ಚೆಯಲ್ಲಿ ಹಲವು ಸ್ವಾರಸ್ಯಕರ ವಿಷಯಗಳು ಸದನವನ್ನು ನಗೆಗಡಲಲ್ಲಿ ತೇಲಿಸಿದವು.
ಕಾರಿನ ಮೇಲೆ ಕಾಗೆ ಕುಳಿತಿರುವುದಕ್ಕೆ ಕಾರು ಬದಲಾಯಿಸಿದ್ದೀರಲ್ಲ ಅದು ಮೂಢನಂಬಿಕೆಯೋ ಅಥವಾ ನಂಬಿಕೆಯೋ ಎಂದು ಶಾಸಕ ಸಿ.ಟಿ. ರವಿ, ಸಿಎಂ ಸಿದ್ದರಾಮಯ್ಯರನ್ನು ಪ್ರಶ್ನಿಸಿದಾಗ, ಸಿಎಂ ನಾನು ಮೊದಲ ಕಾರು ಬದಲಾಯಿಸಬೇಕು ಎಂದು ಕೊಂಡಿದ್ದೆ. ಕಾಗೆ ಕುಳಿತಿದೆ ಎಂದು ಕಾರು ಬದಲಾಯಿಸಿಲ್ಲ ಎಂದು ತಿರುಗೇಟು ನೀಡಿದರು.
 
ರವಿ ನೀನು ನನ್ನ ಕಾರಿನ ಮೇಲೆ 20 ಕಾಗೆಗಳನ್ನು ತಂದು ಕೂರಿಸಿ ನಾನು ಕಾರು ಬದಲಾಯಿಸುವುದಿಲ್ಲ ಎಂದು ಸಿಎಂ ಸವಾಲ್ ಹಾಕಿದರು. ಮತ್ತೆ ಹಿಂದೆ ಇದೊಂದು ಪೈಶಾಚಿಕ ಕೃತ್ಯ ಎಂದೆಲ್ಲಾ ಹೇಳಿದ್ರಿ, ಪಿಶಾಚಿಗಳು ಅಂದ್ರೆ ಹೇಗಿರುತ್ತವೆ ಎಂದು ಪ್ರಶ್ನಿಸಿದರು.
 
ಸಿಎಂ ಪದೇ ಪದೇ ದೆವ್ವ, ಭೂತ, ಪಿಶಾಚಿ ಎನ್ನುತ್ತಿರುತ್ತಾರೆ. ದೆವ್ವ ಪಿಶಾಚಿಗಳು ಹೇಗಿರುತ್ತವೆ. ಅವುಗಳ ರಕ್ತ ಕೆಂಪೋ ಅಥವಾ ಬಿಳಿಯೋ, ಕಾಲುಗಳು ಹೇಗಿರುತ್ತವೆ ಎಂದು ಶಾಸಕ ರವಿ, ಮತ್ತೆ ಸಿಎಂ ರನ್ನು ಕಿಚಾಯಿಸಿದರು.
 
ಶಾಸಕ ಸಿ.ಟಿ.ರವಿ ಮತ್ತು ಸಿಎಂ ಸಿದ್ದರಾಮಯ್ಯ ಮಾತಿನ ಮಧ್ಯೆ ಪ್ರವೇಶಿಸಿದ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರೆಡ್ಡಿ, ಕೆ.ಎಸ್.ಈಶ್ವರಪ್ಪರನ್ನು ನೋಡಿದ್ರೆ ಗೊತ್ತಾಗಲ್ವ ಎಂದು ಗೇಲಿ ಮಾಡಿದರು. ರಾಯರೆಡ್ಡಿ ಹೇಳಿಕೆಗೆ ಸದನವೇ ನಗೆಗಡಲಲ್ಲಿ ತೇಲಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments