Select Your Language

Notifications

webdunia
webdunia
webdunia
webdunia

CWMA ನೀಡಿರುವ ಆದೇಶ ಪಾಲಿಸಲಾಗದ ಆಜ್ಞೆ : ಬಸವರಾಜ ಬೊಮ್ಮಾಯಿ

ಕಾವೇರಿ ನೀರು
ಬೆಂಗಳೂರು : ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸಿನಂತೆ ನಿತ್ಯ 5,000 ಕ್ಯೂಸೆಕ್ ಕಾವೇರಿ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶ ಪಾಲಿಸಲು ಸಾಧ್ಯವಾಗದ ಆಜ್ಞೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
 
ಈ ಸಂಬಂಧ ಟ್ವೀಟ್ ಮಾಡಿರುವ ಬೊಮ್ಮಾಯಿ, ಕಾನೂನು ಹೋರಾಟ ಮಾಡುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು  ಆದೇಶದಂತೆ ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ಮಾಡಿರುವುದು ಪಾಲನೆ ಮಾಡಲು ಸಾಧ್ಯವಿಲ್ಲದ ಒಂದು ಆಜ್ಞೆ ಎಂದಿದ್ದಾರೆ.

ಈ ಆಜ್ಞೆ ಬರುವ ಮುಂಚೆ ನೀರು ಬಿಡಲು ಪ್ರಾರಂಭ ಮಾಡಿರುವ ರಾಜ್ಯ ಸರ್ಕಾರ ತನ್ನ ಕೈಯನ್ನು ತಾನೇ ಕಟ್ಟಿಕೊಂಡಿದೆ. ಕೂಡಲೇ ನೀರು ನಿಲ್ಲಿಸಿ ಸುಪ್ರೀಂ ಕೋರ್ಟ್ನಲ್ಲಿ ರಾಜ್ಯದ ಜನತೆಗೆ ನ್ಯಾಯ ಒದಗಿಸಲು ಕಾನೂನಾತ್ಮಕ ಹೋರಾಟ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಹಳೆ ಸಂಸತ್ ಭವನಕ್ಕೆ ಬೀಳ್ಕೊಡುಗೆ : ನೆಹರೂ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ