Webdunia - Bharat's app for daily news and videos

Install App

5 ಸಾವಿರ ಕ್ಯೂಸೆಕ್​ ನೀರು ಹರಿಸುವಂತೆ ಆದೇಶ

Webdunia
ಗುರುವಾರ, 21 ಸೆಪ್ಟಂಬರ್ 2023 (15:00 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿದಿನ 5 ಸಾವಿರ ಕ್ಯೂಸೆಕ್​ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂ ಕೋರ್ಟ್​​​ ಕರ್ನಾಟಕಕ್ಕೆ ಆದೇಶಿಸಿದೆ. ಮುಂದಿನ 15 ದಿನಗಳವರೆಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್​ ನೀರನ್ನು ತಮಿಳುನಾಡಿಗೆ ಹರಿಸುವಂತೆ ನ್ಯಾಯಮೂರ್ತಿ B.R.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶಿಸಿದೆ. ತಮಿಳುನಾಡು ಪರ ವಕೀಲರಾದ ಮುಕುಲ್​ ರೋಹಟಗಿ ಮತ್ತು ಕರ್ನಾಟಕದ ಪರ ವಕೀಲ ಶ್ಯಾಮ್​ ದಿವಾನ್​ ತಮ್ಮ-ತಮ್ಮ ವಾದವನ್ನು ಮಂಡಿಸಿದ್ರು. ಪ್ರಸ್ತುತ ನೀರಿನ ಸಂಕಷ್ಟ ಇದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಆದರೆ, ಸಂಕಷ್ಟ ಸೂತ್ರವನ್ನು ಕರ್ನಾಟಕ ಪಾಲಿಸುತ್ತಿಲ್ಲ. ನಾವು ಬಹಳಷ್ಟು ಕಡಿಮೆ ನೀರನ್ನು ಪಡೆಯುತ್ತಿದ್ದೇವೆ ಎಂದು ತಮಿಳುನಾಡು ಪರ ವಕೀಲ ಮುಕುಲ್​ ರೋಹಟಗಿ ವಾದ ಮಂಡಿಸಿದ್ರು.. ಕರ್ನಾಟಕ ಪರ ವಾದ ಮಂಡಿಸಿದ ಶ್ಯಾಮ್​ ದಿವಾನ್​, ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶವನ್ನು ನಾವು ಪಾಲಿಸಿದ್ದೇವೆ ಎಂದರು. ವಾದ-ವಿವಾದಗಳನ್ನು ಆಲಿಸಿದ ಬಳಿಕ B.R.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ತಮಿಳುನಾಡಿಗೆ ನೀರು ಹರಿಸಲು ಆದೇಶ ಹೊರಡಿಸಿತು. ಈ ಮೂಲಕ ಕರ್ನಾಟಕಕ್ಕೆ ಸುಪ್ರೀಂಕೋರ್ಟ್​ನಲ್ಲೂ ಹಿನ್ನೆಡೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಒಬ್ಬರೇ ವಾಸವಿದ್ದ ಮಹಿಳೆಯ ಮನೆಯನ್ನು ಶೋಧ ನಡೆಸಿದಾಗ ಸಿಕ್ತು ಲಕ್ಷ ಲಕ್ಷ ಹಣ

ಕಾವೇರಿ ಜಟಾಪಟಿ ನಡುವೆ ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಹರಿಸಲು ಸೂಚನೆ

ನಿರುದ್ಯೋಗವು ಕಳೆದ 40 ವರ್ಷಗಳಲ್ಲೇ ಗರಿಷ್ಠ ಮಟ್ಟದಲ್ಲಿದೆ: ಪ್ರಿಯಾಂಕ ಗಾಂಧಿ

ಬಿ ನಾಗೇಂದ್ರ ರಾಜೀನಾಮೆ ನೀಡುವವರೆಗೂ ರಾತ್ರಿ ಹಗಲು ಧರಣಿ: ಆರ್‌ ಅಶೋಕ್ ಎಚ್ಚರಿಕೆ

ಮುಂದಿನ ಸುದ್ದಿ
Show comments