Webdunia - Bharat's app for daily news and videos

Install App

ನಮ್ಮ ರಾಜ್ಯ ಸರ್ವಜನಾಂಗದ ಶಾಂತಿಯ ತೋಟವಾಗಬೇಕು: ಸಿಎಂ ಸಿದ್ದರಾಮಯ್ಯ

Sampriya
ಮಂಗಳವಾರ, 29 ಅಕ್ಟೋಬರ್ 2024 (15:18 IST)
ಹಾಸನ: ಅಧಿಕಾರಕ್ಕೆ ಬಂದ ಎಂಟು ತಿಂಗಳೊಳಗಾಗಿ ಗ್ಯಾರಂಟಿಗಳನ್ನು ಜಾರಿ ಮಾಡಲಾಯಿತು. ಈ ಯೋಜನೆಗಳಿಂದ ಖಜಾನೆ ಖಾಲಿಯಾಗುತ್ತದೆ, ರಾಜ್ಯ ದಿವಾಳಿಯಾಗುತ್ತದೆ ಎಂದು ವಿರೋಧಪಕ್ಷಗಳು ಟೀಕೆಗಳನ್ನು ಮಾಡುತ್ತಲೇ ಇದೆ. ಆದರೆ ಜನರ ಮಾತ್ರ ಖುಷಿಯಾಗಿದ್ದಾರೆಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 ಹಾಸನಾಂಬ ದೇವಿಯ ದರ್ಶನ ಪಡೆದು ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು.  ಗ್ಯಾರಂಟಿ ಯೋಜನೆಗಳಿಂದ ಖಜಾನೆ ಖಾಲಿಯಾಗುತ್ತದೆ, ರಾಜ್ಯ ದಿವಾಳಿಯಾಗುತ್ತದೆ ಎಂದು ವಿರೋಧಪಕ್ಷಗಳು ಟೀಕಿಸಿದ್ದವು. ಆ ಎಲ್ಲ ಟೀಕೆಗಳನ್ನು ಮೆಟ್ಟಿ ನಿಂತು, ಗ್ಯಾರಂಟಿಗಳನ್ನು ಜಾರಿ ಮಾಡಿ, ಬಡವರಿಗೆ ಶಕ್ತಿ ತುಂಬಲಾಗಿದೆ. ಬಡವರು ಖುಷಿಯಾಗಿದ್ದು, ಸಮಾಧಾನದಿಂದ ಇದ್ದಾರೆ. ಆದರೆ ಬಿಜೆಪಿ ಹಾಗೂ ಜೆಡಿಎಸ್ ನವರಿಗೆ ಸಮಾಧಾನವಾದಂತಿಲ್ಲ. ನಮ್ಮ ಸರ್ಕಾರ ಬಡವರ ಪರವಾಗಿ, ಅವರಿಗೆ ನ್ಯಾಯ ಒದಗಿಸುವ ಕೆಲಸವನ್ನು ಮಾಡುತ್ತಿದ್ದು, ಸಾಮಾಜಿಕ ನ್ಯಾಯ ಹಾಗೂ ಬಡವರ ಪರವಾಗಿಲ್ಲದವರಿಗೆ ಇದರಿಂದ ಸಮಾಧಾನವಿಲ್ಲದಂತಾಗಿದೆ ಎಂದು ಹೇಳಿದರು.

ನಾನು ಎರಡನೇ ಬಾರಿಗೆ ಹಾಸನಾಂಬ ದೇವಿ, ಸಿದ್ದೇಶ್ವರಸ್ವಾಮಿ, ಗಣಪತಿ ದೇವರ ದರ್ಶನವನ್ನು ಪಡೆದು, ರಾಜ್ಯದ ಎಲ್ಲ ಜನತೆಗೆ ಸನ್ಮಂಗಳ ಉಂಟು ಮಾಡಲಿ ಎಂದು ಪ್ರಾರ್ಥಿಸಿದ್ದೇನೆ. ನಾವು ಮನುಜರಾಗಿ ಪರಸ್ಪರ ದ್ವೇಷ ಇರಬಾರದು. ಸಮಾಜದಲ್ಲಿ ದ್ವೇಷವನ್ನು ಬಿತ್ತುವಂತಹ ಪಟ್ಟಭದ್ರ ಹಿತಾಸಕ್ತಿಗಳಿಗೆ ತಕ್ಕ ಶಾಸ್ತಿ ಮಾಡುವಂತೆ ದೇವರನ್ನು ಕೋರಿದ್ದೇನೆ. ಈ ಬಾರಿ ದಸರಾ ಉತ್ಸವದಂತೆ ಹಾಸನಾಂಬ ಜಾತ್ರೆಯನ್ನೂ ಅದ್ದೂರಿಯಾಗಿ ಆಯೋಜಿಸಲಾಗಿದೆ. ನಮ್ಮ ರಾಜ್ಯ ಸರ್ವಜನಾಂಗದ ಶಾಂತಿಯ ತೋಟವಾಗಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಮುಂದಿನ ಸುದ್ದಿ
Show comments