Select Your Language

Notifications

webdunia
webdunia
webdunia
webdunia

ನಮ್ಮದು ಆಪರೇಷನ್ ಅಲ್ಲ ಕೋ ಅಪರೇಷನ್ ಸ್ನೇಹದ ಹಸ್ತ : ಶಿವಕುಮಾರ್

ನಮ್ಮದು ಆಪರೇಷನ್ ಅಲ್ಲ ಕೋ ಅಪರೇಷನ್ ಸ್ನೇಹದ ಹಸ್ತ : ಶಿವಕುಮಾರ್
ಬೆಂಗಳೂರು , ಶನಿವಾರ, 9 ಸೆಪ್ಟಂಬರ್ 2023 (11:53 IST)
ಬೆಂಗಳೂರು : ಆಪರೇಷನ್ ಹಸ್ತ, ಆಪರೇಷನ್ ಕಮಲ ಎರಡರ ವಿರೋಧಿ. ಯಾವುದೇ ಕಾರಣಕ್ಕೂ ಈ ಕೆಲಸಕ್ಕೆ ಮುಂದಾಗುವುದಿಲ್ಲ. ನಮ್ಮದೇನಿದ್ದರೂ ಕೋ-ಆಪರೇಷನ್ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
 
ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು ಸುಕುಮಾರ್ ಶೆಟ್ಟಿ ಆಗಲಿ ಯಾರೇ ಆಗಲಿ ನಾವು ಸ್ನೇಹದ ಹಸ್ತ ಚಾಚುತ್ತೇವೆ. ನಮ್ಮ ಪಕ್ಷದ ತತ್ವ ಸಿದ್ದಾಂತ, ಭಾರತ್ ಜೋಡೋ ಬಗ್ಗೆ ಯಾರಿಗೆ ಒಲವಿದೆ ಅವರನ್ನು ತಬ್ಬಿಕೊಳ್ಳುತ್ತೇವೆ. ಅವರ ಹೆಗಲ ಮೇಲೆ ಕೈಹಾಕಿಕೊಂಡು ಹೆಜ್ಜೆ ಹಾಕುತ್ತೇವೆ. ಹಾಲಿ- ಮಾಜಿಗಳನ್ನ ಯಾರಾದರೂ ತಬ್ಬಿಕೊಳ್ಳುತ್ತೇವೆ ಎಷ್ಟು ಜನ ಸೇರಲಿದ್ದಾರೆ ಎನ್ನುವ ಪಟ್ಟಿ ಹೇಳಲು ಆಗಲ್ಲ. ಅವರವರೇ ಹೇಳಿರುವಂತೆ ಒಳ್ಳೆಯ ಮುಹೂರ್ತ, ಲಗ್ನ ಕೂಡಿ ಬಂದಾಗ ನಡೆಯಲಿದೆ. 

ರಾಜಕೀಯದಲ್ಲಿ ಯಾರೂ ಮಿತ್ರರಲ್ಲ, ಶತ್ರುಗಳಲ್ಲ. ರಾಜಕೀಯ ಎನ್ನುವುದು ಸಾಧ್ಯತೆಗಳ ಕಲೆ. ನಾವು ಯಾರನ್ನು ಕರೆಯುವುದಿಲ್ಲ. ರಾಜಕೀಯದಲ್ಲಿ ಯಾರೂ ದಡ್ಡರಲ್ಲ. ಎಲ್ಲರೂ ಅವರವರ ಭವಿಷ್ಯ ನೋಡಿಕೊಳ್ಳಬೇಕು. ಮಹಾರಾಷ್ಟ್ರದಲ್ಲಿ ಎಲ್ಲಾ ವಾಷಿಂಗ್ ಮೆಷಿನ್ ಸೇರಿಕೊಂಡು ಬಿಡಲಿಲ್ಲವೇ ಎಂದಿದ್ದಾರೆ.

ಇನ್ನು ಕಾವೇರಿ ನೀರನ್ನು ನಿಲ್ಲಿಸುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ನಮಗೆ ಸಾಕಷ್ಟು ಒಳಹರಿವು ಬರುತ್ತಿಲ್ಲ. ಸುಪ್ರೀಂ ಕೋರ್ಟ್ ಹೇಳಿದ ಪ್ರಮಾಣದಷ್ಟು ನೀರನ್ನು ಬಿಡಲು ಆಗುತ್ತಿಲ್ಲ. ಮಳೆಯ ನಿರೀಕ್ಷೆಯಲ್ಲಿದ್ದೇವೆ. ಜೊತೆಗೆ ನಮ್ಮ ರೈತರ ಹಿತ ಕಾಯುವುದು ಮುಖ್ಯ ಅದಕ್ಕೆ ನಾವು ಬದ್ಧ.

ನೀರು ಬಿಡುಗಡೆ ಮಾಡಬಾರದು ಎಂದು ಪ್ರತಿಭಟನೆಗಳು ನಡೆಯುತ್ತಿವೆ, ಬೆಂಗಳೂರು, ರಾಮನಗರ ಭಾಗಗಳಲ್ಲಿ ಮಳೆ ಬೀಳುತ್ತಿರುವ ಕಾರಣ ಸ್ವಲ್ಪ ಮಟ್ಟಿಗೆ ಪರಿಸ್ಥಿತಿ ನಿಭಾಯಿಸಲಾಗುತ್ತಿದೆ. ರೈತರ ಬೆಳೆ ಹಾಗೂ ಕುಡಿಯುವ ನೀರು ನಮ್ಮ ಆದ್ಯತೆ. ನಿಗದಿ ಮಾಡಿದಷ್ಟು ನೀರು ಬಿಡುಗಡೆ ಮಾಡಲು ಬಿಡುಗಡೆ ಮಾಡಲು ನೀರೇ ಇಲ್ಲ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಲೋಕಸಭೆಗೆ ಕಮಲ, ತೆನೆ ಮೈತ್ರಿ ಫೈನಲ್