Webdunia - Bharat's app for daily news and videos

Install App

ಪಾಕ್‌ನ ಹೆಡೆಮುರಿ ಕಟ್ಟಬಹುದು, ಆದ್ರೆ ಕಾಂಗ್ರೆಸ್‌ನ ಹರಕಲು ಬಾಯಿ ಮುಚ್ಚಿಸಲು ಸಾಧ್ಯವಿಲ್ಲ‌: ಅಶೋಕ್‌

Sampriya
ಶುಕ್ರವಾರ, 25 ಏಪ್ರಿಲ್ 2025 (17:51 IST)
Photo Credit X
ಬೆಂಗಳೂರು: ಪಾಪಿ ಪಾಕಿಸ್ತಾನದ ಹೆಡೆಮುರಿ ಕಟ್ಟಬಹುದು ಆದರೆ, ದೇಶದ್ರೋಹಿ ಕಾಂಗ್ರೆಸ್ ನಾಯಕರ ಹರಕಲು ಬಾಯಿ ಮುಚ್ಚಿಸಲು ಸಾಧ್ಯವಿಲ್ಲ‌ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಪಹಲ್ಗಾಮ್‌ನಲ್ಲಿ ಧರ್ಮ ಕೇಳಿ ಯಾರನ್ನೂ ಕೊಂದಿಲ್ಲ ಎಂದು ಕಾಂಗ್ರೆಸ್ ವಕ್ತಾರ ಎಂ ಲಕ್ಷಣ್ ಹೇಳಿಕೆಗೆ ಆರ್‌ ಅಶೋಕ್‌ ತಿರುಗೇಟು ಕೊಟ್ಟಿದ್ದಾರೆ.

ಐಡಿ ಕಾರ್ಡ್ ನೋಡಿ, ಧರ್ಮದ ಹೆಸರು ಕೇಳಿ, ಕಲ್ಮಾ ಹೇಳಿಸಿ, ಪ್ಯಾಂಟು ಬಿಚ್ಚಿ ಪರೀಕ್ಷಿಸಿ ಮತಾಂಧ ಉಗ್ರರು ತಮ್ಮ ಕಣ್ಣೆದುರಿಗೇ ಪಾಯಿಂಟ್ ಬ್ಲ್ಯಾಂಕ್ ನಲ್ಲಿ ತಲೆಗೆ ಗುಂಡಿಕ್ಕಿ ತಮ್ಮ ಪತಿಯನ್ನು, ತಂದೆಯನ್ನು ಕೊಂದ ಕಣ್ಣೀರಿನ ಕಥೆ ಹೇಳುತ್ತಿರುವ ಸಂತ್ರಸ್ತ ಮಹಿಳೆಯರು, ಮಕ್ಕಳ ಆಕ್ರಂದನ ನಿಮಗೆ ಕೇಳುತ್ತಿಲ್ಲವೇ ಎಂ.ಲಕ್ಷಣ್ ಅವರೇ?

ಇಡೀ ದೇಶವೇ ಕಣ್ಣೀರಿಡುತ್ತಿರುವ ಇಂತಹ ಸಂದರ್ಭದಲ್ಲೂ ನಿಮ್ಮ ಓಲೈಕೆ ರಾಜಕಾರಣ ಮುಂದುವರೆಸುತ್ತಿದ್ದೀರಲ್ಲ ನಿಮ್ಮ ನಾಚಿಕೆಗೇಡುತನಕ್ಕೆ ಏನು ಹೇಳೋಣ.

ಗಡಿಯಲ್ಲಿ ಸೇನಾಪಡೆಗಳು ತಮ್ಮ ಪ್ರಾಣವನ್ನೇ ಒತ್ತೆ ಇಟ್ಟು ಪ್ರತೀಕಾರಕ್ಕಾಗಿ ಸಜ್ಜಾಗುತ್ತಿದ್ದರೆ ಇಲ್ಲಿ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ವ್ಯಂಗ್ಯ ಮಡುತ್ತಿದ್ದೀರಲ್ಲ ನಿಮ್ಮ ಭಂಡ ಬಾಳಿಗೆ ಏನು ಹೇಳೋಣ. ಧರ್ಮದ ಹೆಸರು ಕೇಳಿ ಕೊಲ್ಲುವ ಉಗ್ರರಿಗೂ, ಸೇನಾಪಡೆಗಳ ಕಾರ್ಯಾಚರಣೆಗೆ ಸಾಕ್ಷಿ ಕೇಳುವ ನಿಮಗೂ ಯಾವುದೇ ವ್ಯತ್ಯಾಸವಿಲ್ಲ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರೇ, ನಿಮ್ಮ ಕಾಂಗ್ರೆಸ್ ಪಕ್ಷಕ್ಕೆ ಕಿಂಚಿತ್ತಾದರೂ ದೇಶಭಕ್ತಿ ಇದ್ದರೆ, ಎಳ್ಳಷ್ಟಾದರೂ ರಾಷ್ಟ್ರಪ್ರೇಮ ಇದ್ದರೆ ಈ ಕೊಡಲೇ ಲಕ್ಷಣ್ ಅವರನ್ನ ಪಕ್ಷದಿಂದ ಉಚ್ಚಾಟನೆ ಮಾಡಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments