Publish Date: Monday, 10 April 2023 (16:30 IST)
Updated Date: Monday, 10 April 2023 (16:59 IST)
ರಾಜ್ಯ ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ರಣತಂತ್ರ ಹೆಣೆಯುತ್ತಿದೆ.. ಸೆಲೆಬ್ರಿಟಿಗಳನ್ನು ಕರೆತಂದು ಮತದಾರರ ಮನವೊಲಿಯುವಂತೆ ಮಾಡುತ್ತಿದೆ. ನಟ ಕಿಚ್ಚ ಸುದೀಪ್ ಬಿಜೆಪಿಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ ಮತ್ತೊಬ್ಬ ಪ್ಯಾನ್ ಇಂಡಿಯ ಸ್ಟಾರ್ ಪವನ್ ಕಲ್ಯಾಣ್ರನ್ನು ಪ್ರಚಾರಕ್ಕೆ ಕರೆತರಲು ತೀರ್ಮಾನಿಸಿದೆ.. ಕರ್ನಾಟಕ ಗಡಿ ಜಿಲ್ಲೆಗಳಲ್ಲಿ ಪವನ್ ಕಲ್ಯಾಣ್ ತನ್ನದೇ ಆದಂತಹ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.. ಕೋಲಾರ, ರಾಯಚೂರು, ಬಳ್ಳಾರಿ, ಚಿಕ್ಕಬಳ್ಳಾಪುರದಲ್ಲಿ ಪವನ್ ಕಲ್ಯಾಣ್ರನ್ನು ಪ್ರಚಾರಕ್ಕಿಳಿಸಲು ಬಿಜೆಪಿ ತೀರ್ಮಾನಿಸಿದೆ.. ಈ ಕುರಿತು ದೆಹಲಿಯಲ್ಲಿ BJP ರಾಷ್ಟ್ರೀಯ ಅಧ್ಯಕ್ಷ J.P. ನಡ್ಡಾ, ಪವನ್ ಕಲ್ಯಾಣ್ ಜೊತೆಗೆ ಮಾತುಕತೆ ನಡೆಸಿದ್ದಾರೆ.. ಇನ್ನೇನು ಕೆಲವೇ ದಿನಗಳಲ್ಲಿ ಕರುನಾಡಿನ ಗಡಿಭಾಗಗಳಲ್ಲಿ ಬಿಜೆಪಿ ಪರ ಪವನ್ ಕಲ್ಯಾಣ್ ಭರ್ಜರಿ ಪ್ರಚಾರ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ.