Webdunia - Bharat's app for daily news and videos

Install App

ಜನರಿಗೆ ರಾಷ್ಟ್ರೀಯ ಪಕ್ಷಗಳ ಚೇಷ್ಟೆ ನೋಡಿ ಸಾಕಾಗಿದೆ-ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

Webdunia
ಸೋಮವಾರ, 15 ಆಗಸ್ಟ್ 2022 (17:55 IST)
ಗುಪ್ತಗಾಮಿನಿಯಂತೆ ಪಕ್ಷದ ಪರವಾಗಿ ಜನರ ಒಲವು ವ್ಯಕ್ತವಾಗುತ್ತಿದೆ. ಎರಡೂ ರಾಷ್ಟ್ರೀಯ ಪಕ್ಷಗಳ ರಾಜಕೀಯ ಚೇಷ್ಟೆಗಳನ್ನು ನೋಡಿರುವ ಕನ್ನಡಿಗರು ರೋಸಿ ಹೋಗಿದ್ದಾರೆ ಎಂದು ಅವರು ಹೇಳಿದರು.
 
ನೀವು ನಿಮ್ಮ ಶಾಸಕರಿಗೆ ಬಲ ತುಂಬುವ ಕೆಲಸ ಆಗಬೇಕಿದೆ ಎಂದು ಕಾರ್ಯಕರ್ತರಿಗೆ ತಿಳಿಹೇಳಿದ ಮಾಜಿ ಮುಖ್ಯಮಂತ್ರಿಗಳು; ಬಿಬಿಎಂಪಿ ವಾರ್ಡ್ ಮೀಸಲಾತಿಯನ್ನು ಬಿಜೆಪಿ ಸರಕಾರ ತನಗೆ ಬೇಕಾದ ರೀತಿ ಮಾಡಿಕೊಂಡಿದೆ. ಅದೇನೇ ಆದರೂ ನಾವು ದಾಸರಹಳ್ಳಿ ಕ್ಷೇತ್ರದಲ್ಲಿ 10 ವಾರ್ಡ್ ಆದರೂ ಗೆಲ್ಲಲೇಬೇಕು ಎಂದು ಒತ್ತಿ ಹೇಳಿದರು.
 
ಬಿಜೆಪಿ ಸರಕಾರ ಎಲ್ಲ ಕ್ಷೇತ್ರಗಳಲ್ಲೂ ವಿಫಲವಾಗಿದೆ. ಕೊವಿಡ್ ನಿಂದ ಮೃತಪಟ್ಟವರಿಗೆ ಪರಿಹಾರ ಹಣ ಕೊಡುತ್ತೇವೆ ಎಂದು ಹೇಳಿ ಆಮೇಲೆ ಕೊಡಲಿಲ್ಲ. ಬೆಂಗಳೂರಿನಲ್ಲಿ ಯಾವುದೇ ಕೆಲಸ ಮಾಡದೇ ಹಣವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.
 
ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಆಡಳಿತ ನಡೆಸಿ ಹೇಗೆ ನಡೆದುಕೊಂಡಿವೆ ಎನ್ನುವುದನ್ನು ಜನ ನೋಡಿದ್ದಾರೆ. ನಮಗೂ ಒಂದು ಅವಕಾಶ ಕೊಡಿ. ದಾಸರಹಳ್ಳಿಯನ್ನು ಮಾದರಿ ವಿಧಾನಸಭಾ ಕ್ಷೇತ್ರವಾಗಿ ಮಾಡುತ್ತೇವೆ. ನಿಮ್ಮ ದುಡುಮೆಯ ಋಣದ ಭಾರವನ್ನು ಇಟ್ಟೀದ್ದೀರಾ. ಅದಕ್ಕೆ ಗೌರವ ಕೊಡುವ ಕೆಲಸ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments