Webdunia - Bharat's app for daily news and videos

Install App

ಹುಲಿ ದಾಳಿಗೆ ಜನ ತತ್ತರ

Webdunia
ಶನಿವಾರ, 21 ಜುಲೈ 2018 (20:27 IST)
ಕೊಡಗಿನಲ್ಲಿ ಹುಲಿ ಹಾವಳಿ ಮುಂದುವರೆದಿದೆ. ಹಾಡು ಹಗಲೇ ಗ್ರಾಮಕ್ಕೆ ಬಂದ ಹುಲಿಯೊಂದು ಹಸುವನ್ನು ಬೇಟೆಯಾಡಿದೆ. ಈ ಘಟನೆಯಿಂದ ಅಲ್ಲಿನ ಜನರು ಬೆಚ್ಚಿ ಬಿದ್ದಿದ್ದಾರೆ. ಹುಲಿ ಹಸುವನ್ನು ಬಲಿ ತೆಗೆದುಕೊಂಡು ಪರಾರಿಯಾದ ಘಟನೆ ಅವರೆಗುಂದ ಗ್ರಾಮದಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಅವರೆಗುಂದ ಗ್ರಾಮದಲ್ಲಿ ಘಟನೆ ನಡೆದಿದೆ. 

ಅವರೇಗುಂದ ನಿವಾಸಿ ವೈ.ಕೆ ಮಾದ ಎಂಬವರಿಗೆ ಸೇರಿದ ಹಸುವನ್ನು ಮೇಯಲು ಬಿಟ್ಟ ಸಂದರ್ಭ  ಹುಲಿ ದಾಳಿ ಮಾಡಿ ಕೊಂದು ಹಾಕಿದೆ. ಜೊತೆಯಲ್ಲಿ ಇದ್ದ ಮತ್ತೊಂದು ಹಸು ಪ್ರಾಣಾಪಯದಿಂದ ಪಾರಾಗಿ ಮನೆ ಸೇರಿದೆ. ರಸ್ತೆಯಲ್ಲಿ ತೆರಳುತ್ತಿದ್ದ ಮಂದಿ ಹುಲಿ ದಾಳಿಯನ್ನು ಕಂಡು ಭಯಭೀತರಾಗಿದ್ದಾರೆ. ಅಂದಾಜು ನಲವತ್ತು ಸಾವಿರ ಮೌಲ್ಯದ ಹಸು ಅದಾಗಿದ್ದು, ಹಾಲು ಮಾರಿ ಜೀವನ ನಡೆಸುತ್ತಿದ್ದ ಕುಟುಂಬ ಈಗ ಕಂಗಾಲಾಗಿದೆ.  

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಹುಲಿ ಚಲನವಲನ ಗಮನಿಸಲು ಕ್ಯಾಮೆರಾ ಅಳವಡಿಸಿದ್ದಾರೆ. ಹಾಡುಹಗಲೇ ಗ್ರಾಮಕ್ಕೆ ಬಂದು ಜಾನುವಾರುಗಳನ್ನು ಬಲಿ ತೆಗೆದು ಕೊಳ್ಳುತ್ತಿರುವ ಹುಲಿಯನ್ನು ಸೆರೆ ಹಿಡಿಯಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments