Publish Date: Sun, 29 Sep 2019 (18:53 IST)
Updated Date: Sun, 29 Sep 2019 (18:55 IST)
ಏಕಾಏಕಿಯಾಗಿ ಪೆಟ್ರೋಲ್ ಟ್ಯಾಂಕರ್ ಬ್ಲಾಸ್ಟ್ ಆದ ಘಟನೆ ನಡೆದಿದೆ.
ಪೆಟ್ರೋಲ್ ಟ್ಯಾಂಕರ್ ಬ್ಲಾಸ್ಟ್ ಆದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಬ್ಲಾಸ್ಟಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಬೆಂಕಿಯ ನಾಲೆಗೆ ಸಿಲುಕಿ ಒಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಹೊಳಲ್ಕೆಕೆ ಮತ್ತು ಚಿಕ್ಕಜಾಜೂರು ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಶ್ರಮಿಸಿದ್ರು.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಗ್ರಾಮದ ಬಳಿ ನಡೆದ ಘಟನೆ ಇದಾಗಿದೆ.
KA-46-318 ಹಾಸನ ಮೂಲದ ಟ್ಯಾಂಕರ್ ಬ್ಲಾಸ್ಟ್ ಆಗಿದೆ. ಭಾನು ಪ್ರಕಾಶ ಲಾರಿ ಕ್ಲೀನರ್ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ.