Webdunia - Bharat's app for daily news and videos

Install App

ನಾಗಮಂಗಲ ಗಲಭೆಯಲ್ಲಿ ಪಿಎಫ್‌ಐ, ಕೆಎಫ್‌ಡಿ ಕೈವಾಡ ಶಂಕೆ, ಎನ್‌ಐಎ ತನಿಖೆಗೆ ಆರ್‌. ಅಶೋಕ್ ಒತ್ತಾಯ

Sampriya
ಭಾನುವಾರ, 15 ಸೆಪ್ಟಂಬರ್ 2024 (13:45 IST)
ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಪಿಎಫ್‌ಐ, ಕೆಎಫ್‌ಡಿ ಅಂತಹ ನಿಷೇಧಿತ ಸಂಘಟನೆಗಳ ನಂಟು ಹೊಂದಿರುವ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂಬ ಸಂದೇಹವಿರುವುದರಿಂದ ಈ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕೆಂದು ವಿಪಕ್ಷ ನಾಯಕ ಆರ್‌ ಅಶೋಕ್ ಒತ್ತಾಯಿಸಿದರು.

ನಾಗಮಂಗಲ ಗಲಭೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಪಿಎಫ್‌ಐ, ಕೆಎಫ್‌ಡಿ ಅಂತಹ ನಿಷೇಧಿತ ಸಂಘಟನೆಗಳ ನಂಟು ಹೊಂದಿರುವ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಈ ದುರುಳರು ಗಲಭೆಗೊ ಮುನ್ನ 150 ಮಾಸ್ಕ ಖರೀದಿಸಿದ್ದಾರೆ,
ಸಿಸಿಟಿವಿಗಳನ್ನ ನಾಶ ಮಾಡಿದ್ದಾರೆ, ಮತ್ತು ಈ ದುಷ್ಕೃತ್ಯ ಸಂಪೂರ್ಣ ಪ್ರಾಯೋಜಿತ ಮತ್ತು ಪೂರ್ವನಿಯೋಜಿವಾಗಿದೆ ಎಂಬುದು ಸ್ಥಳೀಯರ ಅನುಮಾನವಾಗಿದೆ.

ಅಷ್ಟೇ ಅಲ್ಲದೆ ಸರ್ಕಾರ ದಾಖಲಿಸಿರುವ ಎಫ್‌ಐಆರ್‌ ನಲ್ಲಿ ಮೊದಲ 23 ಆರೋಪಿಗಳು ಹಿಂದೂಗಳೇ ಆಗಿರುವುದರಿಂದ ಪೋಲಿಸರು ನಿಷೇಧಿತ ಸಂಘಟನೆಗಳ ಒತ್ತಡದಲ್ಲಿದ್ದಾರೆಯೇ ಎಂಬ ಸಂದೇಹ ಮೂಡುತ್ತಿದೆ.

ಈ ಕೋಮುಗಲಭೆಯಲ್ಲಿ ನಿಷೇಧಿತ ಸಂಘಟನೆಗಳು ಮತ್ತು ಮತೀಯ ಮೂಲಭೂತವಾದಿಗಳ ಕೈವಾಡವಿರುವ ಬಲವಾದ ಸಂದೇಹವಿರುವುದರಿಂದ ಸ್ಥಳೀಯ ಪೋಲಿಸರು ಈ ಪ್ರಕರಣವನ್ನ ಬೇಧಿಸುವುದು ಕಷ್ಟಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಈ ಪ್ರಕರಣವನ್ನ NIA ಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗು ಗೃಹ ಸಚಿವ ಜಿ ಪರಮೇಶ್ವರ್ ಅವರನ್ನ ಒತ್ತಾಯಿಸುತ್ತೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments