Publish Date: Mon, 10 May 2021 (09:32 IST)
Updated Date: Mon, 10 May 2021 (09:33 IST)
ನವದೆಹಲಿ: ರಾಜ್ಯದ ಕೊರೋನಾ ಸ್ಥಿತಿಗತಿಗಳ ಬಗ್ಗೆ ತಿಳಿಯಲು ಪ್ರಧಾನಿ ಮೋದಿ ಖುದ್ದಾಗಿ ಸಿಎಂ ಯಡಿಯೂರಪ್ಪನವರಿಗೆ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.
ಕರ್ನಾಟಕ ಮಾತ್ರವಲ್ಲದೆ, ಉತ್ತರಪ್ರದೇಶ, ಬಿಹಾರ, ಪಂಜಾಬ್, ಉತ್ತಾರಖಂಡ ರಾಜ್ಯಗಳ ಮುಖ್ಯಮಂತ್ರಿಗಳಿಗೂ ಪ್ರಧಾನಿ ಮೋದಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.
ಅತೀ ಹೆಚ್ಚು ಕೊರೋನಾ ಪ್ರಕರಣಗಳಿರುವ ರಾಜ್ಯಗಳ ಮುಖ್ಯಮಂತ್ರಿಗಳ ಕರೆ ಮಾಡಿ ಅಲ್ಲಿನ ಸ್ಥಿತಿ ಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಇದಕ್ಕೂ ಮೊದಲೂ ಪ್ರಧಾನಿ ಬೇರೆ ಬೇರೆ ರಾಜ್ಯಗಳ ಮುಖ್ಯಮಂತ್ರಿಗಳ ಖುದ್ದಾಗಿ ಕರೆ ಮಾಡಿ ಅಲ್ಲಿನ ಮಾಹಿತಿ ಪಡೆದುಕೊಂಡಿದ್ದರು.