Webdunia - Bharat's app for daily news and videos

Install App

ದರ್ಶನ್ ಅಭಿಮಾನಿಯ ಶರ್ಟ್ ಬಿಚ್ಚಿಸಿ ಬೆಂಡೆತ್ತಿದ ಪೊಲೀಸರು

Krishnaveni K
ಮಂಗಳವಾರ, 25 ಜೂನ್ 2024 (12:25 IST)
Photo Credit: X
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆದ ಬಳಿಕ ನಿರ್ಮಾಪಕ ಉಮಾಪತಿ ಗೌಡ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ನಿಂದಿಸಿದ ಅಭಿಮಾನಿಯೊಬ್ಬನನ್ನು ಪೊಲೀಸಸರು ಬಂಧಿಸಿ ಬೆಂಡೆತ್ತಿದ್ದಾರೆ.

ದರ್ಶನ್ ಬಂಧನವಾಗುತ್ತಿದ್ದಂತೇ ಉಮಾಪತಿ ಗೌಡ ತಮ್ಮಿಬ್ಬರ ನಡುವೆ ನಡೆದ ಹಳೆಯ ವೈಮನಸ್ಯದ ಬಗ್ಗೆ ಮಾತನಾಡಿದ್ದರು. ತಮ್ಮನ್ನು ತಗಡು ಎಂದು ಕರೆದಿದ್ದ ದರ್ಶನ್ ಗೆ ಉಮಾಪತಿ ಗೌಡ ತಿರುಗೇಟು ನೀಡಿದ್ದರು. ಅಲ್ಲದೆ, ದರ್ಶನ್ ಗೆ ಲ್ಯಾಂಬೋರ್ಗಿನಿ ಕಾರು ಖರೀದಿಸಲು ಅಡ್ವಾನ್ಸ್ ಕೊಟ್ಟಿದ್ದೇ ನಾನು ಎಂದು ಟಾಂಗ್ ಕೊಟ್ಟಿದ್ದರು.

ಅವರ ಈ ಹೇಳಿಕೆಗಳ ಬಗ್ಗೆ ಅಭಿಮಾನಿಯೊಬ್ಬ ಸಾರ್ವಜನಿಕವಾಗಿ ಬೆದರಿಕೆ ಹಾಕಿದ್ದ. ಅವಾಚ್ಯ ಶಬ್ಧಗಳಲ್ಲಿ ನಿಂದಿಸಿದ್ದ ಚೇತನ್ ಎಂಬ ದರ್ಶನ್ ಅಭಿಮಾನಿ ಪ್ರಚೋದನಕಾರೀ ಹೇಳಿಕೆ ನೀಡಿದ್ದ. ಅಲ್ಲದೆ, ಬಾಸ್ ಹೊರಬಂದ ಮೇಲೆ ನಿಮ್ಮನ್ನು ನೋಡಿಕೊಳ್ಳುತ್ತಾರೆ ಎಂದು ಉಮಾಪತಿಗೆ ಬೆದರಿಕೆ ಹಾಕಿದ್ದ.

ಈತನನ್ನು ಬಂಧಿಸಿದ ಬಸವೇಶ್ವರನಗರ ಪೊಲೀಸರು ಚೆನ್ನಾಗಿ ಬೆಂಡೆತ್ತಿದ್ದಲ್ಲದೆ, ಶರ್ಟ್ ಬಿಚ್ಚಿಸಿ ವಿಡಿಯೋ ಮಾಡಿ ಕ್ಷಮೆ ಕೇಳಿಸಿದ್ದಾರೆ. ಕಾನೂನು ಪ್ರಕಾರವಾಗಿ ಏನು ಕ್ರಮವಾಗುತ್ತದೆ ಅದು ಆಗಲಿದೆ. ತಪ್ಪಾಗಿ ಮಾತನಾಡಿದ್ದಕ್ಕೆ ಕ್ಷಮೆ ಕೇಳುತ್ತೇನೆ ಎಂದು ಆತ ವಿಡಿಯೋದಲ್ಲಿ ಹೇಳಿಕೆ ನೀಡಿದ್ದಾನೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments