Publish Date: Mon, 10 Apr 2023 (16:15 IST)
Updated Date: Mon, 10 Apr 2023 (17:01 IST)
ಇಂದು ಬಿಜೆಪಿ ಟಿಕೆಟ್ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ರಾಜ್ಯ ಬಿಜೆಪಿ ನಾಯಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಹೀಗಾಗಿ ಬೆಂಗಳೂರಿನ ಮಲ್ಲೇಶ್ವರ ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.. ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದ್ದು, ತಮ್ಮ ಬೆಂಬಲಿಗರಿಗೆ ಟಿಕೆಟ್ ಮಿಸ್ ಆದ್ರೆ ಗಲಾಟೆ ಮಾಡುವ ಸಾಧ್ಯತೆಯಿದೆ.. ಹೀಗಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರ ನಿಯೋಜನೆ ಮಾಡಲಾಗಿದೆ.