Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ED ಮತ್ತೆ ಕಂಟಕವಾಗುವ ಸಾಧ್ಯತೆಗಳಿವೆ . ಇಂದು ಡಿಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಈ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ವಶಕ್ಕೆ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿತ್ತು..ಆದ್ರೆ ಜಾರಿ ನಿರ್ದೇಶನಾಲಯ ಜುಲೈ 30ಕ್ಕೆ ವಿಚಾರಣೆ ಮುಂದೂಡಿದ್ದು,ಡಿಕೆಶಿಗೆ ಕೊಂಚ ರಿಲೀಫ್ ಸಿಕ್ಕಿದೆ. ಅಕ್ರಮ ಆದಾಯ ಗಳಿಕೆ ಹಾಗೂ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಚಾರ್ಜ್ಶೀಟ್ ಹಿನ್ನಲೆ ಡಿ.ಕೆ.ಶಿವಕುಮಾರ್ ಸೇರಿ ಐದು ಮಂದಿ ಆರೋಪಿಗಳಿಗೆ ಕೋರ್ಟ್ ಸಮನ್ಸ್ ನೀಡಿತ್ತು. ಸಮನ್ಸ್ ಹಿನ್ನೆಲೆ ಇಂದು ಡಿ.ಕೆ.ಶಿವಕುಮಾರ್ ವಿಚಾರಣೆ ಹಾಜರಾಗಿದ್ದರು. ಮೊದಲ ದಿನದ ವಿಚಾರಣೆಯಾಗಿರುವ ಹಿನ್ನೆಲೆ ಹೈಕೋರ್ಟ್ನಿಂದ ಈ ಹಿಂದೆ ಪಡೆದ ಜಾಮೀನು ಪರಿಶೀಲನೆ ನಡೆಯಬೇಕಿತ್ತು. . ಈವರೆಗೂ ED ಸಲ್ಲಿಸಿದ ಚಾರ್ಜ್ಶೀಟ್ ಪ್ರತಿ ಲಭ್ಯವಾಗದ ಹಿನ್ನೆಲೆ ವಿಚಾರಣೆ ಮುಂದೂಡಲು ಡಿಕೆಶಿ ಪರ ವಕೀಲರು ಮನವಿ ಮಾಡಿದ