ನಮ್ಮ ಬಳಿಯೂ ಅಸ್ತ್ರ, ಬ್ರಹ್ಮಾಸ್ತ್ರಗಳಿವೆ: ಐಟಿ ದಾಳಿ ಬಗ್ಗೆ ಡಿಕೆಶಿ ಮಾರ್ಮಿಕ ಉತ್ತರ

Webdunia
ಬುಧವಾರ, 30 ಆಗಸ್ಟ್ 2017 (13:37 IST)
ಐಟಿ ಇಲಾಖೆ ಮತ್ತೆ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಆಪ್ತರ ಮೇಲೆ ಕೆಂಗಣ್ಣು ಬೀರಿದೆ. ಬೆಳ್ಳಂ ಬೆಳಗ್ಗೆ ವಿಜಯ್ ಮುಳಗುಂದ ಮನೆ ಸೇರಿ ಕೆಲ ಆಪ್ತರ ಮನೆಗಳ ಮೇಲೆ ದಾಳಿ ನಡೆದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ನಮ್ಮ ಬಳಿಯೂ ಅಸ್ತ್ರ ಬ್ರಹ್ಮಾಸ್ತ್ರಗಳಿವೆ ಎಂದು ಮಾರ್ಮಿಕವಾಗಿ ಉತ್ತರಿಸಿದ್ಧಾರೆ.

 ಕಾನೂನಿನ ಬಗ್ಗೆ ಗೌರವವಿದೆ. ಇಲಾಖೆಗಳಿಗೆ ಗೌರವ ಕೊಡುತ್ತೇವೆ. ಆದರೆ, ವಿನಾಕಾರ ಬೇರೆಯವರಿಗೆ ತೊಂದರೆ ಕೊಡುತ್ತಿದ್ದಾರೆ. ರೆಸಾರ್ಟ್`ನಲ್ಲಿ ಶಾಸಕರನ್ನ ನೋಡಿಕೊಂಡಿದ್ದ ವಿಜಯ್ ಅವರ ಮನೆಗಳ ಮೇಲೆ ದಾಳಿ ನಡೆಸಿ ತೊಂದರೆ ಕೊಡುತ್ತಿದ್ದಾರೆ. ನಮ್ಮ ಬಳಿಯೂ ಅಸ್ತ್ರಗಳಿವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಐಟಿ ದಾಳಿ ಬಳಿಕ ಇದೇ ಮೊದಲ ಬಾರಿಗೆ ಶಕ್ತಿ ದೇವತೆಗಳಾದ ಕಬ್ಬಾಳಮ್ಮ ದೇವಿ ದೇಗುಲ ಮತ್ತು ಚಾಮುಂಡಿಬೆಟ್ಟಕ್ಕೆ ತೆರಳಿ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಐಟಿ ದಾಳಿ ಹಿಂದೆ ರಾಜಕೀಯ ಉದ್ದೇಶದ ಬಗ್ಗೆ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ಬೆಳಗ್ಗೆಯಿಂದ 10 ಐಟಿ ಅಧಿಕಾರಿಗಳ ತಂಡ ಡಿ.ಕೆ. ಶಿವಕುಮಾರ್ ಆಪ್ತ ವಿಜಯ್ ಮುಳಗುಂದ ಅವರ ರಾಜಾಜಿನಗರದ ನಿವಾಸದ ಮೇಲೆ ದಾಳಿ ನಡೆಸಿದ್ದು, ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿದ್ಧಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಹೆಣ್ಣೆಂಬ ಕಾರಣಕ್ಕೆ ಸ್ವಂತ ಮಗುವನ್ನು ಸಂಪ್‌ಗೆ ಹಾಕಿ ಕೊಲೆಗೈದ ಪಾಪಿ ತಂದೆ

ಮುಂದಿನ ಸುದ್ದಿ
Show comments