Webdunia - Bharat's app for daily news and videos

Install App

ಒರಿಜಿನಲ್ ಕಾಂಗ್ರೆಸಿಗರಲ್ಲ ಎಂದು ಪ್ರಹ್ಲಾದ್ ಜೋಶಿ ಟೀಕೆ

Webdunia
ಶನಿವಾರ, 20 ಆಗಸ್ಟ್ 2022 (17:30 IST)
ಕಾಂಗ್ರೆಸ್ ನಾಯಕರು ಸಾವರ್ಕರ್​​ರನ್ನು ಗುರಿಯಾಗಿಸಿಕೊಂಡು ನೀಡುತ್ತಿರುವ ಹೇಳಿಕೆಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದು, "ಕಾಂಗ್ರೆಸ್‌ನ ಮೊದಲ ಕುಟುಂಬ"ದ ಕೊಡುಗೆಯನ್ನು ಪ್ರಶ್ನಿಸಿದ್ದಾರೆ. ಕೊಡಗಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ‌ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ಆಗಲಿ ಬೇರೆಯವರಿಗೆ ಆಗಲಿ ಮೊಟ್ಟೆ ಎಸೆಯುವುದು ತಪ್ಪು. ಮೊಟ್ಟೆ ಎಸೆದಿದ್ದು ಸರಿಯಲ್ಲ. ಕಪ್ಪು ಧ್ವಜ ಪ್ರದರ್ಶನ ಮಾಡುವವರ ಪರ ನಾನು ಇಲ್ಲ. ಅದು ಸಮರ್ಥನೀಯವಲ್ಲ. ಆದರೆ ಸಿದ್ದರಾಮಯ್ಯ ಅವರು ಸಾವರ್ಕರ್ ಬಗ್ಗೆ ಹೇಳಿದ್ದನ್ನು ಇಲ್ಲಿ ಗಮನಿಸಬೇಕು. ಸಾವರ್ಕರ್ ಬಗ್ಗೆ ವಿಶ್ವಾಸ, ಶ್ರದ್ಧೆ ಇದ್ದವರಿಗೆ ಅವರು ಅಪಮಾನವಾಗುವ ರೀತಿಯಲ್ಲಿ ಮಾತನಾಡಿದ್ದಾರೆ. ಸಾವರ್ಕರ್ ಗುರುತಿಸಲ್ಪಡುವ ಭಾರತದ ಸುಪುತ್ರ ಎಂದು ಸ್ವತಃ ಇಂದಿರಾಗಾಂಧಿ ಅವರು ಹೇಳಿದ್ದರು. ಮಹಾತ್ಮ ಗಾಂಧಿಜೀ ಸೇರಿದಂತೆ ಅಂದಿನ ಕಾಂಗ್ರೆಸ್ ನಾಯಕರು ಸಾವರ್ಕರ್ ಬಿಡುಗಡೆಗೆ ಬ್ರಿಟೀಷ್ ಸರ್ಕಾರಕ್ಕೆ ಆಗ್ರಹಿಸಿದ್ದರು. ಅವರೆಲ್ಲ ಒರಿಜಿನಲ್ ಕಾಂಗ್ರೆಸಿಗರು.‌ ವಿಚಾರಗಳಲ್ಲಿ ಭಿನ್ನಾಭಿಪ್ರಾಯಗಳಿದ್ದರೂ, ಸಾವರ್ಕರ್ ಅವರ ಹೋರಾಟ, ವ್ಯಕ್ತಿತ್ವಕ್ಕೆ ಗೌರವ ಕೊಡುತ್ತಿದ್ದರು. ಈಗಿರುವವರು ನಕಲಿ ಕಾಂಗ್ರೆಸಿಗರು. ಇವರು ಸಾವರ್ಕರ್ ವಿರುದ್ಧ ಮಾತನಾಡುತ್ತಿದ್ದಾರೆ. ಇವರು ಒರಿಜಿನಲ್ ಕಾಂಗ್ರೆಸಿಗರಲ್ಲ ಎಂದು ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments