Publish Date: Thu, 22 Feb 2018 (08:32 IST)
Updated Date: Thu, 22 Feb 2018 (08:34 IST)
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸಚಿವ ಅನಂತಕುಮಾರ್ ವಿರುದ್ಧ ಕಿಡಿ ಕಾರಿದ್ದಕ್ಕೆ ಸಚಿವರ ಆಪ್ತರೊಬ್ಬರು ದೂರು ದಾಖಲಿಸಿರುವ ಹಿನ್ನಲೆಯಲ್ಲಿ ಪ್ರಕಾಶ್ ರೈ ಜನರ ಬಳಿ ಪ್ರಶ್ನೆಯೊಂದನ್ನು ಮುಂದಿಟ್ಟಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಜಸ್ಟ್ ಆಸ್ಕಿಂಗ್ ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ ಕೇಂದ್ರ ಸರ್ಕಾರದ ನಡೆಗಳನ್ನು ವಿರೋಧಿಸುವ ರೈ, ತಾವು ಮಾಡಿದ್ದು ಸರಿಯೋ ತಪ್ಪೋ ಎಂದು ಲೈಕ್ಸ್, ಡಿಸ್ ಲೈಕ್ಸ್ ಮತ್ತು ಕಾಮೆಂಟ್ ಮೂಲಕ ಹೇಳಿ ಎಂದು ಟ್ವೀಟ್ ಮಾಡಿದ್ದಾರೆ.
ಸಚಿವ ಅನಂತಕುಮಾರ್ ಹೆಗ್ಡೆ ಆಪ್ತನ ದೂರಿನ ಬಗ್ಗೆ ಮಾತನಾಡಿರುವ ಅವರು, ಈ ರೀತಿಯಾಗಿ ಕೇಂದ್ರ ಸರ್ಕಾರದ ಸಚಿವರೊಬ್ಬರ ಆಪ್ತ ನನ್ನ ಜಸ್ಟ್ ಆಸ್ಕಿಂಗ್ ಅಭಿಯಾನವನ್ನು ತಪ್ಪಾಗಿ ಬಿಂಬಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಫಾಲೋವರ್ ಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ