Webdunia - Bharat's app for daily news and videos

Install App

ಕಾಂಗ್ರೆಸ್ ಎಂದರೆ ಕಳ್ಳರ ಪಾರ್ಟಿ: ಪ್ರಲ್ಹಾದ್ ಜೋಶಿ

Krishnaveni K
ಶನಿವಾರ, 14 ಸೆಪ್ಟಂಬರ್ 2024 (15:47 IST)
ಹುಬ್ಬಳ್ಳಿ: ಕಾಂಗ್ರೆಸ್ ಎಂದರೆ ಕಳ್ಳರ ಪಾರ್ಟಿ. ಹಾಲಿನ ದರ ಏರಿಕೆ ಮಾಡಿದರೂ ಅದು ರೈತರಿಗೆ ಸಿಗುತ್ತದೆ ಎನ್ನುವುದಕ್ಕೆ ಯಾವುದೇ ಖಾತ್ರಿಯಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಂಗ್ಯ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಂದಿನಿ ಹಾಲಿನ ದರ ಏರಿಕೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಹಿಂದೆ ಯಾಕೆ ನಂದಿನಿ ಹಾಲಿನ ದರ ಏರಿಕೆ ಮಾಡಿದ್ದರು? ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ರೈತರಿಗೆ ಪ್ರೋತ್ಸಾಹ ಧನ ಕೊಟ್ಟಿಲ್ಲ ಎಂದು ಅವರು ಟೀಕಿಸಿದ್ದಾರೆ.

ಹಾಲಿನ ದರ ಹೆಚ್ಚಳ ಮಾಡಿದರೂ ರೈತರಿಗೆ ಕೊಡುವುದು ಅನುಮಾನ. ನಾನು ಭವಿಷ್ಯ ಹೇಳುತ್ತೇನೆ. ಈ ನಾಟಕವೆಲ್ಲಾ ಎರಡು ತಿಂಗಳು ಮಾತ್ರ. ಮತ್ತೆ ಎಲ್ಲವೂ ಬಂದ್ ಆಗುತ್ತದೆ ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ದರ ಏರಿಕೆ ಮಾಡಲು ರೈತರು ಒಂದು ನೆಪ ಅಷ್ಟೇ ಎಂದಿದ್ದಾರೆ.

ಇನ್ನು, ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ರೇಸ್ ಬಗ್ಗೆ ಪ್ರತಿಕ್ರಿಯಿಸಿದ ಅವರು ‘ಈ ಹಿಂದೆ ಸೀಮೆ ಎಣ್ಣೆ, ಹಾಲಿನ ಡೈರಿ ಮುಂದೆ ಜನ ಕ್ಯೂ ನಿಲ್ಲುತ್ತಿದ್ದರು. ಅದೇ ರೀತಿ ಈಗ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಕ್ಯೂ ನಿಂತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಒಂದೊಂದೇ ಹಗರಣಗಳಿಂದಾಗಿ ಆಡಳಿತ ವ್ಯವಸ್ಥೆ ಕುಸಿಯುತ್ತಿದೆ. ಇದೀಗ ಕೆಎಂಎಫ್ ಗತಿಯೂ ಅದೇ ಆಗಲಿದೆ’ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಜನರ ಋಣ ತೀರಿಸಲು ಆರನೇಯ ಭೂ ಗ್ಯಾರಂಟಿ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

Covid 19: ಮತ್ತೆ ಶುರುವಾಯ್ತು ಕೊರೋನಾ ಹಾವಳಿ: ಈಗ ಬಂದಿರುವ ಹೊಸ ವೈರಸ್ ಯಾವುದು

ಮುಂದಿನ ಸುದ್ದಿ
Show comments