Webdunia - Bharat's app for daily news and videos

Install App

ಸರಿಯಾಗಿ ಹಣಕಾಸು ನಿರ್ವಹಣೆ ಮಾಡದೇ ಕೇಂದ್ರ ಹಣ ಕೊಡಲ್ಲ ಅಂದ್ರೆ ಹೇಗೆ: ಪ್ರಲ್ಹಾದ್ ಜೋಶಿ

Krishnaveni K
ಶನಿವಾರ, 12 ಅಕ್ಟೋಬರ್ 2024 (14:52 IST)
ಬೆಂಗಳೂರು: ನೀವು ಸರಿಯಾಗಿ ಹಣಕಾಸು ನಿರ್ವಹಣೆ ಮಾಡದೇ ಈಗ ಕೇಂದ್ರ ಸರ್ಕಾರ ಸರಿಯಾಗಿ ಕೊಡುತ್ತಿಲ್ಲ ಎಂದು ದೂಷಿಸಿದರೆ ಹೇಗೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

ಇತ್ತೀಚೆಗೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ತೆರಿಗೆ ಹಣ ಹಂಚಿಕೆ ಮಾಡಿದೆ. ಆದರೆ ಕರ್ನಾಟಕಕ್ಕೆ ತೆರಿಗೆ ಹಣ ಹಂಚಿಕೆ ಮಾಡುವಾಗ ತಾರತಮ್ಯ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಬಗ್ಗೆ ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಮತ್ತೊಮ್ಮೆ ಹೋರಾಟ ಮಾಡಲು ಕಾಂಗ್ರೆಸ್ ಮುಂದಾಗಿದೆ.

ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಿಂದಿನ ಯುಪಿಎ ಅವಧಿಗಿಂತಲೂ ಈಗಿನ ಎನ್ ಡಿಎ ಸರ್ಕಾರ ರಾಜ್ಯಕ್ಕೆ ತೆರಿಗೆ ಪಾಲು ಹೆಚ್ಚು ಕೊಟ್ಟಿದೆ. ಅಷ್ಟಕ್ಕೂ ಎಷ್ಟು ಹಣ ಕೊಡಬೇಕು ಎಂದು ನಿರ್ಧರಿಸುವುದು ಕೇಂದ್ರ ಸರ್ಕಾರವಲ್ಲ. ಹಣಕಾಸು ಆಯೋಗ. ಹಣಕಾಸು ಆಯೋಗ ನಿಗದಿಪಡಿಸಿದಷ್ಟು ಕೇಂದ್ರ ಹಣ ಕೊಟ್ಟಿದೆ ಎಂದು ಜೋಶಿ ಹೇಳಿದ್ದಾರೆ.

2016-17 ರಲ್ಲಿ ಸಿದ್ದರಾಮಯ್ಯ ಇದ್ದಾಗಲೇ ಹಣಕಾಸು ಆಯೋಗ ಎಷ್ಟು ಹಣ ಕೊಡಬೇಕೆಂದು ನಿಗದಿಪಡಿಸಿದೆ. ಆಗಲೇ ಹಣಕಾಸು ಆಯೋಗದ ಮುಂದೆ ತಮ್ಮ ವಾದ ಮಂಡಿಸಬೇಕಿತ್ತು. ಆಗ ಸುಮ್ಮನಿದ್ದು ಈಗ ಮಾತನಾಡಿದರೆ ಪ್ರಯೋಜನವಾಗುತ್ತದೆಯೇ ಎಂದು ಜೋಶಿ ಪ್ರಶ್ನೆ ಮಾಡಿದ್ದಾರೆ.

ಏನೇ ಕೆಟ್ಟದಾದರೂ ಅದು ಬಿಜೆಪಿಯಿಂದ ಎನ್ನುವ ಜಾಯಮಾನ ಕಾಂಗ್ರೆಸ್ ರೂಢಿಸಿಕೊಂಡಿದೆ. ಸರಿಯಾಗಿ ಹಣಕಾಸಿನ ಪರಿಸ್ಥಿತಿ ನಿಭಾಯಿಸಿದ್ರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಇನ್ನಾದರೂ ಹಣಕಾಸು ಆಯೋಗದ ಮುಂದೆ ತಮ್ಮ ವಾದ ಸರಿಯಾಗಿ ಮಂಡಿಸಿ ಎಂದು ಜೋಶಿ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments