Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕೋಲಾರ : ದೇವಾಲಯದಲ್ಲಿ ವಿತರಿಸಿದ ಪ್ರಸಾದ ಸೇವಿಸಿ ಭಕ್ತರು ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಬೀಗರಾಯನಹಳ್ಳಿಯಲ್ಲಿ ನಡೆದಿದೆ.
ಹಳ್ಳಿಯ ಗಂಗಮ್ಮ ದೇವಾಲಯದಲ್ಲಿ ಶನಿವಾರ ಹೊಸ ವರ್ಷಾಚರಣೆಯ ಅಂಗವಾಗಿ ವಿಶೇಷ ಪೂಜೆ ನಡೆದಿತ್ತು. ನಂತರದಲ್ಲಿ ದೇವಾಲಯದ ಆಡಳಿತ ಮಂಡಳಿ ಮಾಡಿಸಿದ ಪ್ರಸಾದವನ್ನು ಭಕ್ತರಿಗೆ ವಿತರಿಸಲಾಗಿದೆ.
ಪ್ರಸಾದದ ರೂಪದಲ್ಲಿ ಚಿತ್ರಾನ್ನ ಹಾಗೂ ಕೇಸರಿಬಾತ್ ಸೇವಿಸಿದ ಭಕ್ತರು ಅಸ್ವಸ್ಥಗೊಂಡಿದ್ದಾರೆ. 50ಕ್ಕೂ ಹೆಚ್ಚು ಜನರನ್ನು ಶ್ರೀನಿವಾಸಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.