Webdunia - Bharat's app for daily news and videos

Install App

ಚನ್ನಪಟ್ಟಣಕ್ಕೆ ಪ್ರತಾಪ್ ಸಿಂಹ ಮೈತ್ರಿ ಅಭ್ಯರ್ಥಿ, ಹೀಗೊಂದು ಚರ್ಚೆ

Sampriya
ಬುಧವಾರ, 18 ಸೆಪ್ಟಂಬರ್ 2024 (19:07 IST)
Photo Courtesy X
ಬೆಂಗಳೂರು: ರಾಜ್ಯದಲ್ಲಿ ಖಾಲಿಯಾದ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಭಾರೀ ಕುತೂಹಕ್ಕೆ ಕಾರಣವಾಗಿದೆ. ಈ ಕ್ಷೇತ್ರದ ಗೆಲುವಿಗಾಗಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಬಾರೀ ಪೈಪೋಟಿ ಏರ್ಪಟ್ಟಿದೆ.

ಇಲ್ಲಿ ಸ್ಪರ್ಧೆಗೆ ಇಳಿಯುವ ಅಭ್ಯರ್ಥಿಗಳ ಬಗ್ಗೆ ಈಗಾಗಲೇ ಲೆಕ್ಕಚಾರ ಶುರುವಾಗಿದೆ. ಈಗಾಗಲೇ ನಿಖಿಲ್ ಕುಮಾರಸ್ವಾಮಿ ಹಾಗೂ ಸಿಪಿ ಯೋಗೇಶ್ವರ್ ಹೆಸರು ಮುನ್ನೆಲೆಗೆ ಇದೆ. ಆದರೆ ಇದೀಗ ರಾಜಕೀಯ ವಲಯದಲ್ಲಿ ಪ್ರತಾಪ್ ಸಿಂಹ ಹೆಸರು ಕೇಳಿಬರುತ್ತಿದೆ.

ಸಿಕ್ಕ ಮಾಹಿತಿ ಪ್ರಕಾರ ಪ್ರತಾಪ್ ಸಿಂಹ ಅವರು ಮೈತ್ರಿ ಅಭ್ಯರ್ಥಿಯಾಗಿ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆಂಬ ಸುದ್ದಿಯಿದೆ.  ಇನ್ನೂ ಕಾಂಗ್ರೆಸ್ ವಲಯದಲ್ಲೂ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ಜೋರಾಗಿದೆ.

ಇದೀಗ ಲೋಕಸಭೆಯಲ್ಲಿ ಬಿಜೆಪಿ - ಜೆಡಿಸ್ ಮೈತ್ರಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿ ಸಂಸತ್ತಿಗೆ ಹೋಗಿದ್ದರಿಂದ ಚನ್ನಪಟ್ಟಣದ ಮೈತ್ರಿ ಟಿಕೆಟ್ ಅನ್ನು ಯಾರಿಗೆ ನೀಡಬೇಕು ಎಂಬ ಕುತೂಹಲ ಉಂಟಾಗಿದೆ.

ಜೆಡಿಎಸ್ ಪಕ್ಷದಿಂದ ಗೆದ್ದ ಕ್ಷೇತ್ರವನ್ನು ಮೈತ್ರಿ ಧರ್ಮ ಪಾಲಿಸುವುದಕ್ಕಾಗಿ ಬಿಜೆಪಿಗೆ ಬಿಟ್ಟು ಕೊಡಲು ಒಪ್ಪುತ್ತಿಲ್ಲ. ಆದರೆ, ಇಲ್ಲಿ ಬಿಜೆಪಿ ನಾಯಕ ಸಿ.ಪಿ. ಯೋಗೇಶ್ವರ ಮೈತ್ರಿ ಟಿಕೆಟ್ ತನಗೇ ಕೊಡಬೇಕು ಎಂದು ಪಟ್ಟು ಹಿಡಿದಿದ್ದು, ಇದರ ಬೆನ್ನಲ್ಲೇ ಪ್ರತಾಪ್ ಸಿಂಹ ಅವರ ಹೆಸರು ಕೇಳಿಬರುತ್ತಿದ್ದು ಕುತೂಹಲ ಹೆಚ್ಚು ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments