Select Your Language

Notifications

webdunia
webdunia
webdunia
webdunia

ಪ್ರೆಸ್ ಕ್ಲಬ್ ಅತ್ಯುತ್ತಮ ವ್ಯಕ್ತಿ ಯಡಿಯೂರಪ್ಪ

New year
ಬೆಂಗಳೂರು ಪ್ರೆಸ್‍ಕ್ಲಬ್ ನೀಡುವ ಪ್ರೆಸ್‍ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಜನರಾಗಿದ್ದಾರೆ.
ಪ್ರೆಸ್‍ಕ್ಲಬ್ ವಿಶೇಷ ಪ್ರಶಸ್ತಿಗೆ ಪದ್ಮಶ್ರೀ ಪುರಸ್ಕøತ ಹರೆಕಳ ಹಾಜಬ್ಬ ಮತ್ತು ಕೊರೊನಾ ನಿರ್ವಹಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಆಯ್ಕೆಯಾಗಿದ್ದಾರೆ.
 
ಎಂ.ಕೆ.ಭಾಸ್ಕರ್, ಪದ್ಮರಾಜ್ ದಂಡಾವತಿ, ರಂಜಾನ್ ದರ್ಗಾ, ಕೆ.ಜಿ.ವಾಸುಕಿ, ಡಾ. ಜಗದೀಶ್ ಕೊಪ್ಪ, ಕೆ.ಆರ್. ಬಾಲಸುಬ್ರಹ್ಮಣ್ಯಂ, ಬಿ.ವಿ.ಶಿವಶಂಕರ್, ಯತೀಶ್‍ಕುಮಾರ್ ಜಿ.ಡಿ., ಸುದರ್ಶನ್ ಚನ್ನಂಗಿಹಳ್ಳಿ, ದೊಡ್ಡಬೊಮ್ಮಯ್ಯ, ಕೆ.ಎಂ.ವೀರೇಶ್, ವಾಸಂತಿ ಹರಿಪ್ರಕಾಶ್, ಪ್ರಶಾಂತ್ ನಾಥೂ, ಪ್ರಕಾಶ್ ಬೆಳವಾಡಿ, ಎಸ್.ಎಚ್.ಮಾರುತಿ, ಭಾನುಪ್ರಕಾಶ್ ಚಂದ್ರ ಸೇರಿದಂತೆ 16 ಮಂದಿ ಹಿರಿಯ ಪತ್ರಕರ್ತರನ್ನು 2021ನೆ ಸಾಲಿನ ಪ್ರೆಸ್‍ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
 
ಇದೇ ಜನವರಿ 6ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರ್‍ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪುರಸ್ಕøತರನ್ನು ಸನ್ಮಾನಿಸಲಿದ್ದಾರೆ ಎಂದು ಪ್ರೆಸ್‍ಕ್ಲಬ್ ಅಧ್ಯಕ್ಷರಾದ ಸದಾಶಿವ ಶೆಣೈ, ಪ್ರಧಾನ ಕಾರ್ಯದರ್ಶಿ ಎಚ್.ವಿ. ಕಿರಣ್ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೇಕೆದಾಟು ಪಾದಯಾತ್ರೆಗೆ ಕೊರೊನಾ ಬ್ರೇಕ್