Webdunia - Bharat's app for daily news and videos

Install App

ಮತದಾನ ದಿನ ಕಚೇರಿಗಳಿಗೆ ಕಡ್ಡಾಯ ರಜೆ ಕೊಡಬೇಕು

Krishnaveni K
ಮಂಗಳವಾರ, 16 ಏಪ್ರಿಲ್ 2024 (10:27 IST)
ಬೆಂಗಳೂರು: ಲೋಕಸಭೆ ಚುನಾವಣೆ ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ನಡೆಯಲಿದ್ದು, ಎರಡೂ ದಿನಗಳಲ್ಲಿ ಆಯಾ ಪ್ರದೇಶಗಳಲ್ಲಿ ಕಚೇರಿಗಳಿಗೆ ಕಡ್ಡಾಯ ರಜೆ ಕೊಡಬೇಕು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

ಒಂದು ವೇಳೆ ರಜೆ ಕೊಡದೇ ಇದ್ದರೆ ಅಂತಹ ಕಂಪನಿಗಳ ವಿರುದ್ಧ ತಕ್ಕ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಈಗಾಗಲೇ ಐಟಿ-ಬಿಟಿ ಕಂಪನಿಗಳು, ಇತರೆ ಖಾಸಗಿ ಕಂಪನಿಗಳನ್ನು ಸಂಪರ್ಕಿಸಿ ಈ ಬಗ್ಗೆ ಸೂಚನೆ ನೀಡಲಾಗಿದೆ. ಉದ್ಯೋಗಿಗಳು ಮತ ಚಲಾಯಿಸಲು ತಮ್ಮ ಊರುಗಳಿಗೆ ಹೋಗಲು ಅನುಕೂಲವಾಗುವಂತೆ ರಜೆ ನೀಡಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ವರ್ಕ್ ಫ್ರಂ ಹೋಂ ಮಾಡುವಂತೆಯೂ ಹೇಳುವಂತಿಲ್ಲ. ಕಡ್ಡಾಯವಾಗಿ ರಜೆ ನೀಡಲೇಬೇಕು. ಮತದಾನ ಮಾಡುವಂತೆ ಉದ್ಯೋಗಿಗಳಿಗೆ ಉತ್ತೇಜಿಸಬೇಕು. ಸಾಧ‍್ಯವಾದಲ್ಲಿ ಅವರಿಗೆ ಊರಿಗೆ ತೆರಳಲು ವಾಹನ ವ್ಯವಸ್ಥೆ ಮಾಡಿಕೊಡಬೇಕು ಎಂದು ಸೂಚನೆ ನೀಡಿರುವುದಾಗಿ ಅವರು ಹೇಳಿದ್ದಾರೆ.

ಈ ಮೊದಲು ಕಡಿಮೆ ಮತದಾನವಾಗಿರುವ ಬಿಬಿಎಂಪಿಯ ವಾರ್ಡ್ ಗಳಿಗೆ ತೆರಳಿ ಈಗ ಮತದಾನ ಮಾಡುವಂತೆ ಅರಿವು ಮೂಡಿಸಲಾಗುತ್ತಿದೆ. ಮತದಾನ ಮಾಡುವಂತೆ ಅಪಾರ್ಟ್ ಮೆಂಟ್ ನಿವಾಸಿಗಳನ್ನೂ ಮನವಿ ಮಾಡಲಾಗಿದೆ. ಅಲ್ಲದೆ, ಮಾಲ್, ಥಿಯೇಟರ್ ಗಳಿಗೆ ತೆರಳಿ ಮತದಾನ ಮಾಡಲು ಮನವಿ ಮಾಡಿದ್ದೇವೆ ಎಂದು ಮೀನಾ ಹೇಳಿದ್ದಾರೆ.

ಏಪ್ರಿಲ್ 26 ಮತ್ತು ಮೇ 7 ರಂದು ಕರ್ನಾಟಕದಲ್ಲಿ ಮತದಾನ ನಡೆಯಲಿದೆ. ಬೆಂಗಳೂರು, ಕರ್ನಾಟಕ ದಕ್ಷಿಣ ಭಾಗದಲ್ಲಿ ಏಪ್ರಿಲ್ 26 ರಂದು ಚುನಾವಣೆ ನಡೆಯಲಿದೆ. ಉತ್ತರ ಕರ್ನಾಟಕದ ಕೆಲವು ಕಡೆ ಮೇ 7 ರಂದು ಮತದಾನ ಪ್ರಕ್ರಿಯೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಮುಂದಿನ ಸುದ್ದಿ
Show comments