ನಿಷೇಧ ಆರ್ ಎಸ್ಎಸ್ ಗೆ ಮಾತ್ರನಾ, ಬೇರೆ ಧರ್ಮಕ್ಕೂ ಇದೆಯಾ: ಪ್ರಿಯಾಂಕ್ ಖರ್ಗೆ ಹೇಳಿದ್ದೇನು

Krishnaveni K
ಗುರುವಾರ, 16 ಅಕ್ಟೋಬರ್ 2025 (16:58 IST)
ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ಎಸ್ ಚಟುವಟಿಕೆಗಳಿಗೆ ನಿಷೇಧ ಹೇರಿದ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಇದು ಕೇವಲ ಆರ್ ಎಸ್ಎಸ್ ಗೆ ಮಾತ್ರವಾ ಬೇರೆ ಧರ್ಮದ ಸಂಘಟನೆಗೆ ಅನ್ವಯಿಸುತ್ತಾ ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

ಆರ್ ಎಸ್ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುತ್ತಾರೆ ಎಂಬ ಸುದ್ದಿ ಬೆನ್ನಲ್ಲೇ ಸಾರ್ವಜನಿಕವಾಗಿ ಇದು ಬೇರೆ ಧರ್ಮಕ್ಕೂ ಅನ್ವಯಿಸುತ್ತಾ? ಕೇವಲ ಆರ್ ಎಸ್ಎಸ್ ಗೆ ಮಾತ್ರ ಯಾಕೆ? ರಾಜಕೀಯ ಪಕ್ಷಗಳ ಸಮಾವೇಶಗಳಿಗೂ ಬ್ರೇಕ್ ಬೀಳಲಿ, ಅನ್ಯ ಧರ್ಮದವರ ಪ್ರಾರ್ಥನೆಗಳಿಗೂ ಬ್ರೇಕ್ ಹಾಕಲಿ ಎಂದು ಆಗ್ರಹಿಸಿದ್ದರು.

ಇದಕ್ಕೀಗ ಪ್ರಿಯಾಂಕ್ ಖರ್ಗೆ ಉತ್ತರಿಸಿದ್ದಾರೆ. ಶಾಲೆ ಇರೋದು ಯಾಕೆ? ಶಿಕ್ಷಣದ ಕೆಲಸಕ್ಕೆ. ಅಲ್ಲಿ ಇವರು ಆರ್ ಎಸ್ಎಸ್ ಚಟುವಟಿಕೆ ಮಾಡುವುದು ಯಾಕೆ? ಸಾರ್ವಜನಿಕ ಸ್ಥಳಗಳಲ್ಲಿ ಲಾಠಿ ಹಿಡಿದುಕೊಂಡು ಓಡಾಡುವುದು ಯಾಕೆ? ಇದಕ್ಕೆಲ್ಲಾ ನಾವು ಕಡಿವಾಣ ಹಾಕಿದ್ದೇವಷ್ಟೇ.

ಯಾರೇ ಇರಲಿ, ಯಾವುದೇ ಧರ್ಮ ಇರಲಿ ಇದು ಅನ್ವಯಿಸುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಡಲೇಬೇಡಿ ಎಂದು ನಾವು ಹೇಳುತ್ತಿಲ್ಲ. ಅದಕ್ಕೆ ಸರ್ಕಾರದ ಒಪ್ಪಿಗೆ ಪಡೆಯಿರಿ ಎಂದಷ್ಟೇ ಹೇಳುತ್ತಿದ್ದೇವೆ. ಒಪ್ಪಿಗೆ ಪಡೆದುಕೊಂಡು ಕಾರ್ಯಕ್ರಮ ಮಾಡಿ. ನಾವೇನು ಬಿಜೆಪಿ ಅಥವಾ ಆರ್ ಎಸ್ಎಸ್ ನನ್ನೇ ನಿಷೇಧ ಮಾಡಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬಳಿ ರಾಜೀನಾಮೆ ಕೇಳಲು ರಾಹುಲ್ ಗಾಂಧಿ ಮನವೊಲಿಸಿದ ವ್ಯಕ್ತಿ ಯಾರೆಂದು ಬಯಲು

ಸಿಎಂ ಸ್ಥಾನಕ್ಕೆ ರಾಜೀನಾಮೆ ಸುದ್ದಿ ಬೆನ್ನಲ್ಲೇ ಇಂದು ಸಿದ್ದರಾಮಯ್ಯ, ಡಿಕೆಶಿ ಒಂದೇ ವೇದಿಕೆಯಲ್ಲಿ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿ ಮಳೆ, ತಪ್ಪದೇ ಗಮನಿಸಿ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಮುಂದಿನ ಸುದ್ದಿ
Show comments