ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

Krishnaveni K
ಮಂಗಳವಾರ, 1 ಜುಲೈ 2025 (10:21 IST)
ಬೆಂಗಳೂರು: ನಾವು ಮತ್ತೆ ಅಧಿಕಾರಕ್ಕೆ ಬಂದರೆ ಆರ್ ಎಸ್ಎಸ್ ನಿಷೇಧ ಮಾಡುವುದಾಗಿ ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆಗೆ ಹಿಂದೂ ಸಂಘಟನೆಗಳು, ಬೆಂಬಲಿಗರು ಮೊದಲು ಗೆಲ್ಲಿ ಆಮೇಲೆ ಬ್ಯಾನ್ ಮಾಡಿ ಎಂದು ಸವಾಲು ಹಾಕಿದ್ದಾರೆ.

ಈ ಹಿಂದೆ ನಾವು ಅಧಿಕಾರದಲ್ಲಿದ್ದಾಗ ಆರ್ ಎಸ್ಎಸ್ ನ್ನು ಬ್ಯಾನ್ ಮಾಡಲು ಮುಂದಾಗಿದ್ದೆವು. ಆಗ ಅವರು ಕೈ ಕಾಲು ಹಿಡ್ಕೊಂಡ್ರು ಅಂತ ಹಿಂತೆಗೆದುಕೊಂಡೆವು. ಆದರೆ ಆಗ ನಾವು ಹಾಗೆ ಮಾಡಿದ್ದೇ ತಪ್ಪಾಯ್ತು. ಇನ್ನೊಂದು ಸಲ ನಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗ ಆರ್ ಎಸ್ಎಸ್ ನಿಷೇಧ ಮಾಡುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದರು.

ಅವರ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಮೊದಲು ನೀವು ಅಧಿಕಾರಕ್ಕೆ ಬನ್ನಿ ನಂತರ ನಿಷೇಧದ ಮಾತು ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಟಾಂಗ್ ಕೊಟ್ಟಿದ್ದಾರೆ. ಈ ಹಿಂದೆ ಬಹುಮತದಿಂದ ಅಧಿಕಾರಕ್ಕೆ ಬಂದಿದ್ದ ಇಂದಿರಾ ಗಾಂಧಿ, ರಾಜೀವ್ ಗಾಂಧಿಯವರಿಗೇ ಆರ್ ಎಸ್ಎಸ್ ಬ್ಯಾನ್ ಮಾಡಲು ಸಾಧ್ಯವಾಗಿಲ್ಲ. ಇನ್ನೂ ಈಗ ನಿಮ್ಮ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಹೆಣಗಾಡುತ್ತಿರುವವರಿಗೆ ಸಾಧ್ಯವಾ ಎಂದು ಪ್ರಶ್ನೆ ಮಾಡಿದ್ದಾರೆ.

ಆರ್ ಎಸ್ಎಸ್ ನ್ನು ನಿಷೇಧ ಮಾಡಿ ನೋಡಿ. ಮತ್ತೆ ನೀವೆಂದೂ ಅಧಿಕಾರಕ್ಕೆ ಬರೋದೇ ಇಲ್ಲ. ಆರ್ ಎಸ್ಎಸ್ ನಿಷೇಧ ಮಾಡುವುದು ಅಷ್ಟು ಸುಲಭವಲ್ಲ ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪರ ಸುನಾಮಿಯಂಥ ಅಲೆ: ವಿಜಯೇಂದ್ರ

ಖುರಾನ್ ನಲ್ಲಿ ನಮಾಜ್ ಮಾಡುವಾಗ ಹಾವು ಕಂಡ್ರೂ ಕೊಲ್ಲಬೇಕು ಅಂತಾರೆ, ಬಿಜೆಪಿ, ಆರ್ ಎಸ್ಎಸ್ ನ್ನೂ ಕೊಲ್ಲಿ: ಖರ್ಗೆ Video

ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆ ಜಾಸ್ತಿ, ಅಂದ್ರೆ ಭಾರತಕ್ಕಿಂತ ನಾವೇ ಶ್ರೀಮಂತರು ಎಂದ ಪಾಕ್ ಪ್ರಜೆ: Video

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಧ್ವಂಸ: ಕಾಂಗ್ರೆಸ್ ನಾಯಕರ ಹೇಳಿಕೆ

Karnataka Weather: ಬೆಂಗಳೂರಿಗರೇ ವಿಪರೀತ ಬಿಸಿಲಿಗೆ ಸಿದ್ಧರಾಗಿ

ಮುಂದಿನ ಸುದ್ದಿ
Show comments