Publish Date: Wed, 24 Aug 2022 (10:44 IST)
Updated Date: Wed, 24 Aug 2022 (10:23 IST)
ಕೊಡಗು ಜಿಲ್ಲೆಯಲ್ಲಿ ಮೊಟ್ಟೆ ಕೇಸ್ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.
ಇದರಿಂದಾಗಿ ಬಿಜೆಪಿ ಜಿಲ್ಲಾ ಸಮಾವೇಶ ಹಮ್ಮಿಕೊಂಡಿರುವ ದಿನವೇ ಕಾಂಗ್ರೆಸ್ ಸಹ `ಮಡಿಕೇರಿ ಚಲೋ ಪ್ರತಿಭಟನೆ ಹಮ್ಮಿಕೊಂಡಿತ್ತು.
ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ನಾಳೆಯಿಂದ ಆ.27ರ ಸಂಜೆ 6 ಗಂಟೆವೆರೆಗ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಈ 4 ದಿನಗಳ ಕಾಲ ಮದ್ಯ ಮಾರಾಟವನ್ನೂ ನಿಷೇಧಿಸಲಾಗಿದೆ.
ಇದೇ ವೇಳೆ ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರು ಹಾಗೇ ಮುಂದುವರಿಯಬೇಕು. ಇದು ನಮ್ಮ ಹಾಗೂ ಜನರ ಅಭಿಪ್ರಾಯವೂ ಆಗಿದೆ.
ಆದ್ರೆ ಜಿಲ್ಲಾ ಕೇಂದ್ರದ ವಿಷಯ ಬಂದಾಗ ಹೋರಾಟಗಾರರು ಸಂಘ ಸಂಸ್ಥೆಗಳು ಕೆಲವರು ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಅಗಬೇಕು ಅಂತ ಹೇಳಿದ್ದಾರೆ. ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡೋಣ ತಿಳಿಸಿದ್ದಾರೆ.