Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮಡಿಕೇರಿ : ಕೊಡಗಿನಲ್ಲಿ 4 ದಿನಗಳಿಂದ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಜಿಲ್ಲಾಡಳಿತ ಶನಿವಾರ ಸಂಜೆ ಹಿಂಪಡೆದಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣದ ಬಳಿಕ ಉಂಟಾದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶುಕ್ರವಾರ ಕಾಂಗ್ರೆಸ್ನಿಂದ ಮಡಿಕೇರಿ ಚಲೋ ಮತ್ತು ಬಿಜೆಪಿಯಿಂದ ಜನ ಜಾಗೃತಿ ಸಮಾವೇಶ ಘೋಷಣೆಯಾಗಿತ್ತು.
ಆದರೆ ಕೋಮು ಸೂಕ್ಷ್ಮ ಜಿಲ್ಲೆಯಾದ ಕೊಡಗಿನಲ್ಲಿ ಪರಿಸ್ಥಿತಿಯ ದುರ್ಲಾಭವನ್ನು ಹೊರಗಿನ ವ್ಯಕ್ತಿಗಳು ಪಡೆಯಲು ನಡೆಸಿರುವ ಹುನ್ನಾರ ಗೊತ್ತಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಆಗಸ್ಟ್ 24ರ ಬೆಳಗ್ಗೆ 6 ರಿಂದ ಇಂದು ಸಂಜೆ 6 ಗಂಟೆ ತನಕ ನಿಷೇಧಾಜ್ಞೆ ಜಾರಿ.