Publish Date: Mon, 27 Mar 2023 (18:50 IST)
Updated Date: Mon, 27 Mar 2023 (18:48 IST)
ಕಾಂಗ್ರೆಸ್ನ ಹಿರಿಯ ಮಾಜಿ ಸಚಿವ ಮನೋಹರ್ ತಹಶಿಲ್ದಾರ ಟಿಕೆಟ್ ಕೈ ತಪ್ಪಿದಕ್ಕೆ ಹಾವೇರಿಯ ಹಾನಗಲ್ನಲ್ಲಿ ಮನೋಹರ ಬೆಂಬಲಿಗರು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿ ಅಸಮಾಧಾನ ಹೊರಹಾಕಿದ್ದಾರೆ. ಹಾನಗಲ್ ಕನಕ ವೃತ್ತದಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಕಾಂಗ್ರೆಸ್ ನಾಯಕರ ವಿರುದ್ಧ ಹಾಗೂ ಪಕ್ಷದ ವಿರುದ್ಧ ಮನೋಹರ ಬೆಂಬಲಿಗರು ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಮಾಜಿ ಸಚಿವ ಮನೋಹರ್ ತಹಶಿಲ್ದಾರ ನಡೆ ನಿಗೂಢ ವಾಗಿದ್ದು,ಕಾಂಗ್ರೆಸ್ ಪಕ್ಷ ತ್ಯಜಿಸಿ ಜೆಡಿಎಸ್ ಪಕ್ಷ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.