ಅತ್ಯಾಚಾರ ಪ್ರಕರಣ ಖಂಡಿಸಿ ಪ್ರತಿಭಟನೆ

Webdunia
ಗುರುವಾರ, 5 ಜುಲೈ 2018 (15:35 IST)
8 ವರ್ಷದ ಬಾಲಕಿ ದಿವ್ಯಾ ಮೇಲಿನ ಅತ್ಯಾಚಾರ ಪ್ರಕರಣ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ನಾವುಂದ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. 
 
ನಾವುಂದ ರಿಚರ್ಡ್ ಅಲ್ಮೇಡಾ ಮೆಮೋರಿಯಲ್ ಪಿಯು ಕಾಲೇಜು ಹಾಗೂ ನಾವುಂದ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
 
ಕಾಲೇಜಿನಿಂದ ರ್ಯಾಲಿ ಮೂಲಕ ಹೊರಟ ವಿದ್ಯಾರ್ಥಿಗಳು ಕುಂದಾಪುರದ  ನಾವುಂದ ಪಂಚಾಯತ್ ಗೆ ತೆರಳಿ  ಮನವಿ ಸಲ್ಲಿಸಿದರು.
 
ವಿದ್ಯಾರ್ಥಿನಿಗಳಾದ ಸುನೀತಾ ಹಾಗೂ ಅನುಷಾ ಮಾತನಾಡಿ ಅತ್ಯಾಚಾರವೆಸಗುವ ಕಾಮುಕರಿಗೆ ವಿದೇಶಗಳಲ್ಲಿರುವಂತೆ ಉಗ್ರವಾದ ಶಿಕ್ಷೆ ನೀಡುವಂತಹ ಉಗ್ರ ಕಾನೂನುಗಳನ್ನು ರೂಪಿಸಬೇಕು. ಹೀಗಾದ್ದಲ್ಲಿ ಮಾತ್ರ ಮುಂದಿನ ದಿನಗಳಲ್ಲಿ ದೇಶದಲ್ಲಿ ಅತ್ಯಾಚಾರದಂತಹ ಪ್ರಕರಣಗಳು ನಡೆಯುವುದಿಲ್ಲ. ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಉಗ್ರ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. 
 
ಪ್ರತಿಭಟನೆಯ ಮುಂದಾಳತ್ವವನ್ನು ಸುಪ್ರೀತ್, ಕಾರ್ತಿಕ್, ಭಾರ್ಗವ್, ಪ್ರಣೀತ್, ಮನೋಜ, ಅನುಪಮಾ, ರಕ್ಷಿತಾ ವಹಿಸಿದ್ದರು.
 
ಬೈಂದೂರು ಸಿಪಿಐ ಪರಮೇಶ್ವರ್ ಗುನಗಾ, ಪಿಎಸ್ಐ ತಿಮ್ಮೇಶ್ ಬಿ.ಎನ್ ಬಂದೋಬಸ್ತ್ ಏರ್ಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುವಜನತೆಗೆ ಯುವನಿಧಿ ಆಸರೆ: ಸೇವಾ ಸಿಂಧುವಿನಲ್ಲಿ ನೋಂದಾಯಿಸಲು ದಿನೇಶ್‌ ಗೂಳಿಗೌಡ ಮನವಿ

ಕಾನೂನುಬಾಹಿರವಾಗಿ ಕಾಂಗ್ರೆಸ್ ಭವನಕ್ಕೆ ನಿವೇಶನ ವಿರುದ್ಧ ಬಿಜೆಪಿ ಹೋರಾಟ

26ರಂದು ಯಡಿಯೂರಪ್ಪನವರ ಅಭಿಮಾನೋತ್ಸವದ ಭೂಮಿಪೂಜೆ

ಜಲ್ಮುರಿ ನಾನು ಸೇವಿಸಿದ್ರೆ, ಅದರ ಖಾರ ತಟ್ಟಿದ್ದು ಮಾತ್ರ ಟಿಎಂಸಿಗೆ: ಮೋದಿ ವ್ಯಂಗ್ಯ

ಮೇ 18ರಿಂದ ಎಸ್ಸೆಸ್ಸೆಲ್ಸಿ ಎರಡನೇ ಪರೀಕ್ಷೆ: ಮರುಮೌಲ್ಯಮಾಪನ ಬಗ್ಗೆ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments