Publish Date: Thu, 09 Nov 2023 (14:42 IST)
Updated Date: Thu, 09 Nov 2023 (14:18 IST)
ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆ ವೈಫಲ್ಯದ ವಿರುದ್ಧ ಪಡಿತರ ವಿತರಕರ ಸಂಘ ಪ್ರತಿಭಟನೆ ನಡೆಸಿದೆ.ನಗರದ ಫ್ರೀಡಂ ಪಾರ್ಕ್ ನಲ್ಲಿ 10 ಕೆಜಿ ಅಕ್ಕಿ ಮತ್ತು ಪಡಿತರ ಅಂಗಡಿ ಮಾಲಿಕರಿಗೆ ಕಮಿಷನ್ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ.
ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಪಡಿತರ ವಿತರಕರ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸಿದೆ.ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ. ಟಿ ಕೃಷ್ಣಪ್ಪ ಆಕ್ರೋಶ ಹೊರಹಾಕಿದ್ದು,ಪ್ರತಿಭಟನೆ ಸ್ಥಳಕ್ಕೆ ಸಚಿವರು ಆಗಮಿಸಿ ಪಡಿತರ ವಿತರಕರ ಸಮಸ್ಯೆ ಬಗೆಹರೋಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.ಪ್ರತಿಭಟನೆಯಲ್ಲಿ ಸಾವಿರಕ್ಕೂ ಹೆಚ್ಚು ಪಡಿತರ ವಿತರಕರು ಭಾಗಿಯಾಗಿದ್ದಾರೆ.