ತೃತೀಯ ಲಿಂಗಿಗಳಿಂದ ಪ್ರತಿಭಟನೆ

Webdunia
ಗುರುವಾರ, 20 ಡಿಸೆಂಬರ್ 2018 (14:36 IST)

ಲಿಂಗಿ ಪರಿವರ್ತಿತರ ಹಕ್ಕುಗಳ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡನೆಮಾಡುವುದರಿಂದ ಕೈಬಿಡಬೇಕು. ಹೀಗಂತ ಒತ್ತಾಯಿಸಿ ತೃತೀಯ ಲಿಂಗಿಗಳು ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ಟೌನ್ಹಾಲ್ ಮುಂಭಾಗದಲ್ಲಿ ತೃತೀಯಲಿಂಗಿಗಳು ಪ್ರತಿಭಟನೆ ನಡೆಸಿದರು. ಇದೇ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ಮಂಡನೆಯಾದ ಮಸೂದೆಯನ್ನು ಅನುಮೋದನೆಗಾಗಿ ರಾಜ್ಯ ಸಭೆಯ ಆಯ್ಕೆ ಸಮಿತಿಗೆ ಶಿಫಾರಸ್ಸು ಮಾಡಬೇಕೆಂದು ತೃತೀಯಲಿಂಗಿ ಒಕ್ಕೊರಲಿನಿಂದ ಒತ್ತಾಯಿಸಿದ್ದಾರೆ.

ಮಸೂದೆಯಲ್ಲಿ ತೃತೀಯ ಲಿಂಗಿಗಳೆಂದರೆ ಯಾರು ಎಂಬ ಬಗ್ಗೆ ಸ್ಪಷ್ಟವಾದ ವ್ಯಾಖ್ಯಾನವಿಲ್ಲ. ಬಹಳಷ್ಟು ತೃತೀಯ ಲಿಂಗಿಗಳು ತಮ್ಮನ್ನು ತಾವು ತೃತೀಯ ಲಿಂಗಿ ಎಂದು ಗುರುತಿಸಿಕೊಳ್ಳಲು ಇಚ್ಛಿಸುವುದಿಲ್ಲ. ಬದಲಾಗಿ ಅವರು ಗಂಡು ಅಥವಾ ಹೆಣ್ಣು ಎಂದು ಗುರುತಿಸಿಕೊಳ್ಳಲು ಬಯಸುತ್ತಾರೆ. ಹಿನ್ನೆಲೆಯಲ್ಲಿ ನೋಡಿದರೆ ಇದು ಅಂತಹವರ ಆಯ್ಕೆಯ ಅವಕಾಶ ನೀಡಿದೆಯೇ ಎಂಬುದು ಕೂಡ ಸ್ಪಷ್ಟವಾಗಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಭಾರತದಲ್ಲಿ ಇರುವ ಸುಮಾರು 18 ಲಕ್ಷ ಮಂದಿ ತೃತೀಯ ಲಿಂಗಿಗಳು ಸಮಾಜದಲ್ಲಿ ಎದುರಿಸುತ್ತಿರುವ ಅವಮಾನ, ತಾರತಮ್ಯ ಮತ್ತು ನಿಂದನೆಯನ್ನು ನಿವಾರಿಸುವ ನಿಟ್ಟಿನಲ್ಲಿ ಅವರಿಗೆ ಕಾನೂನು ರಕ್ಷಣೆ ಒದಗಿಸಲು ಮತ್ತು ಮೂಲಕ ಸಮಾಜದಲ್ಲಿ ಸಮಾನ ಸ್ಥಾನಮಾನ ನೀಡಲು ಪ್ರತ್ಯೇಕ ಕಾಯ್ದೆ ಜಾರಿಗೆ ತರುವ ಉದ್ದೇಶದಿಂದ ಮಸೂದೆ ರಚಿಸಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಕದನ ವಿರಾಮ ಘೋಷಣೆಯ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ನಿಲ್ಲದ ದಾಳಿ

ಕದನ ವಿರಾಮ ಬೆನ್ನಲ್ಲೇ ಇರಾನ್‌ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ಮಹತ್ವದ ಸೂಚನೆ

2028ಕ್ಕೆ ಕಾಂಗ್ರೆಸ್ ಸೋಲು ತಪ್ಪಿಸೋಕೆ ಯಾರಿಂದಲೂ ಸಾಧ್ಯವಿಲ್ಲ: ಬಿಜೆಪಿ ನಾಯಕ ಸಿ.ಟಿ. ರವಿ

ಮಧ್ಯಪ್ರಾಚ್ಯ ಸಂಘರ್ಷ: ಕರಾವಳಿ ಮಂದಿಯ ಶುಭಕಾರ್ಯಕ್ಕೆ ಭಾರೀ ಪೆಟ್ಟು

ತಡಿಯಾಂಡಮೋಳ್ ಬೆಟ್ಟದಲ್ಲಿ ಕೇರಳ ಯುವತಿ ನಾಪತ್ತೆ ಕೇಸ್ ಬೆನ್ನಲ್ಲೇ ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಕೇರಳದ 14ರಬಾಲಕಿ ನಾಪತ್ತೆ

ಮುಂದಿನ ಸುದ್ದಿ
Show comments