Webdunia - Bharat's app for daily news and videos

Install App

ಮಾಜಿ ಸಿಎಂ‌ ಬಂಗಾರಪ್ಪ ಪುತ್ರಿ ಮನೆ ಮುಂದೆ ಪ್ರೊಟೆಸ್ಟ್

Webdunia
ಸೋಮವಾರ, 27 ಮಾರ್ಚ್ 2023 (17:20 IST)
ಕೋಟ್ಯಾಂತರ ರೂಪಾಯಿ ಸಾಲ ಪಡೆದು ವಾಪಸ್ ನೀಡದೆ ಸತಾಯಿಸಿರುವ ಆರೋಪ ಮಾಜಿ‌ ಮುಖ್ಯಮಂತ್ರಿ ಬಂಗಾರಪ್ಪ ಕೊನೆಯ ಪುತ್ರಿ ಅನಿತಾ ಪವನ್ ಮೇಲೆ ಕೇಳಿ ಬಂದಿದೆ. ಈ ಸಂಬಂಧ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿರುವ ಬಂಗಾರಪ್ಪ ಪುತ್ರಿ ‌ನಿವಾಸದ ಮುಂದೆ ಕಳೆದ‌ ಎರಡು ದಿನಗಳಿಂದ ಸಾಲ ನೀಡಿದ್ದ ದಂಪತಿ ಪ್ರತಿಭಟನೆ ‌ನಡೆಸುತ್ತಿದ್ದಾರೆ.
ಹಾಸನದ ಚನ್ನರಾಯಪಟ್ಟಣದ ಹಿರಿಸಾವೆ ಮೂಲದ‌ ಓಂಪ್ರಕಾಶ್ ಹಾಗೂ ಪತ್ನಿ ಎರಡು ದಿನಗಳಿಂದ ಅನಿತಾ ಮನೆ ಮುಂದೆ ಪ್ರೊಟೆಸ್ಟ್ ನಡೆಸಿದ್ದಾರೆ. ಸುಮಾರು 5 ಕೋಟಿವರೆಗೂ ಸಾಲ ನೀಡಿದ್ದು ಕಳೆದ ಮೂರಾಲ್ಕು ವರ್ಷಗಳಿಂದ ಹಣ ವಾಪಸ್ ನೀಡುವುದಾಗಿ ಸತಾಯಿಸುತ್ತಿದ್ದಾರೆ‌. ಹಲವು ಬಾರಿ ಹಣ ಕೇಳಲು ಹೋದಾಗ ಚೆಕ್ ನೀಡಿದ್ದರು. ನೀಡಿದ ಚೆಕ್ ಗಳೆಲ್ಲವೂ ಬೌನ್ಸ್ ಆಗಿವೆ. ಮನೆ ರಿಜಿಸ್ಟ್ರೇಷನ್ ಗಾಗಿ ಹಾಗೂ ಇಡಲಾಗಿದ್ದ ಒಡವೆ ಹರಾಜು ಬಂದಿರುವುದಾಗಿ ಹೇಳಿ ನನ್ನ‌ ಕಡೆಯಿಂದ ಕೋಟ್ಯಾಂತರ ರೂ ಸಾಲ ಪಡೆದಿದ್ದಾರೆ. ಆರಂಭದಲ್ಲಿ ತೆಗೆದುಕೊಂಡ ಸಾಲಕ್ಕೆ ಬಡ್ಡಿ ಪಾವತಿಸಿದ ಅನಿತಾ ಕಾಲಕ್ರಮೇಣ ಹಣ ವಾಪಸ್ ನೀಡಿಲ್ಲ‌. ಈ ಬಗ್ಗೆ ಚನ್ನರಾಯನಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಕೀಲರ ಮೂಲಕ ನೋಟಿಸ್ ಕಳುಹಿಸಿದರು ಪ್ರಯೋಜನವಾಗಿಲ್ಲ. ಸದ್ಯ ಎರಡು ದಿನಗಳಿಂದ ಅವರ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದರೂ ಅನಿತಾ ಕ್ಯಾರೆ ಎಂದಿಲ್ಲ‌ ಎಂದು ಓಂ ಪ್ರಕಾಶ್ ಆಳಲು ತೋಡಿಕೊಳ್ಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments