ಪಿಎಸ್ ಐ ನೇಮಕಾತಿ ಅಕ್ರಮದ ಆಡಿಯೋ ತನಿಖೆ: ಸಿಎಂ ಬಸವರಾಜ ಬೊಮ್ಮಾಯಿ

Webdunia
ಶನಿವಾರ, 23 ಏಪ್ರಿಲ್ 2022 (16:22 IST)
ಪಿಎಸ್ ಐ ನೇಮಕಾತಿಯ ಯಾವುದೇ ಬ್ಯಾಚ್ ನಲ್ಲಿ ಅಕ್ರಮವಾಗಿದ್ದರೂ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಶನವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಆಡಿಯೋ ನಾನು ಕೇಳಿಲ್ಲ.ಯಾವ ಮೆಟೀರಿಯಲ್ ಇದ್ದರೂ ತನಿಖೆಯಾಗುತ್ತದೆ. ಇಬ್ಬರ ನಡುವೆ ಮಾತುಕತೆಯಾಗಿದೆ. ಅವರಿಬ್ಬರು ಯಾರು, ಅವರ ಅರ್ಹತೆ ಏನು ಎನ್ನುವುದು ತನಿಖೆಯಲ್ಲಿ ತಿಳಿಯುತ್ತದೆ. ಆಡಿಯೋವನ್ನು ಸಹ ತನಿಖೆಗೆ ಒಳಪಡಿಸಿ ಯಾರೇ ತಪ್ಪಿತಸ್ಥರಿದ್ದರೂ, ಯಾವುದೇ ಬ್ಯಾಚ್ ಆಗಿದ್ದರೂ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಕಳೆದ 15 ದಿನಗಳ ಹಿಂದೆ ಶಾಲೆಗಳಿಗೆ ಬಂದಿದ್ದ ಬೆದರಿಕೆ ಇ- ಮೇಲ್ ಸಿರಿಯಾ ಹಾಗೂ ಪಾಕಿಸ್ತಾನದಿಂದ  ಬಂದಿದೆ ಎಂಬ ಮಾಹಿತಿ ಬಂದಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಗೊತ್ತಿಲ್ಲ. ಪೊಲೀಸ್ ಆಯುಕ್ತರೊಂದಿಗೆ  ಮಾತನಾಡುವುದಾಗಿ ತಿಳಿಸಿದರು.
ಇವೆಲ್ಲಾ ಆಗಾಗ್ಗೆ ಶಾಂತಿ ಕದಡಲು ಈ ರೀತಿಯ ಪ್ರಯತ್ನಗಳಾಗುತ್ತವೆ. ಕಳೆದ ವರ್ಷವೂ ಆಗಿದೆ. ಪ್ರಕರಣವನ್ನು  ಗಂಭೀರವಾಗಿ ಪರಿಗಣಿಸಲಾಗಿದೆ. ಇ- ಮೇಲ್ ಮೂಲವನ್ನು ಪತ್ತೆ ಹಚ್ಚಲಾಗುವುದು. ಯಾವ ದೇಶದಿಂದ ಬಂದಿದೆ ಎಂದು ಗೊತ್ತಾಗುತ್ತದೆ. ಕೆಲವು ಸಂದರ್ಭದಲ್ಲಿ ಆ ದೇಶದ ಅಧಿಕಾರಿಗಳಿಗೆ ತಿಳಿಸಿ, ಕೆಲವರನ್ನು ಬಂಧಿಸಲಾಗಿದೆ.  ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments