Webdunia - Bharat's app for daily news and videos

Install App

ಬೆಂಗಳೂರು ಕಾವೇರಿ ನೀರಿನ ದರ ಏರಿಕೆಗೆ ಜನಾಕ್ರೋಶ: ಬಿಟ್ಟಿ ಭಾಗ್ಯಕ್ಕಾಗಿ ಇನ್ನು ಎಷ್ಟು ಕಿತ್ಕೊಳ್ತೀರಿ

Krishnaveni K
ಗುರುವಾರ, 10 ಏಪ್ರಿಲ್ 2025 (12:23 IST)
Photo Credit: X
ಬೆಂಗಳೂರು: ಹಲವು ಬೆಲೆ ಏರಿಕೆಗಳ ಮಧ್ಯೆ ಈಗ ಬೆಂಗಳೂರಿಗರಿಗೆ ಕಾವೇರಿ ನೀರಿನ ದರ ಏರಿಕೆ ಶಾಕ್ ಸಿಕ್ಕಿದೆ. ನೀರಿನ ದರ ಏರಿಕೆಗೆ ಸೋಷಿಯಲ್ ಮೀಡಿಯಾಗಳಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು ಬಿಟ್ಟಿ ಭಾಗ್ಯಕ್ಕಾಗಿ ಇನ್ನೂ ಎಲ್ಲೆಲ್ಲಿ ಕಿತ್ಕೊಳ್ತೀರಿ ಎಂದು ಪ್ರಶ್ನಿಸಿದ್ದಾರೆ.

ಒಂದೆಡೆ ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿರುವ ರಾಜ್ಯ ಸರ್ಕಾರ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ಬೆಲೆ ಏರಿಕೆ ಮಾಡಿದೆ. ಇತ್ತೀಚೆಗಷ್ಟೇ ಬಸ್, ಹಾಲು, ವಿದ್ಯುತ್, ಕಸ ಎಲ್ಲವೂ ದುಬಾರಿ ದುನಿಯಾ ಆಗಿದೆ.

ಇದರ ನಡುವೆ ಬೆಂಗಳೂರಿಗರಿಗೆ ನಮ್ಮ ಮೆಟ್ರೊ ಪ್ರಯಾಣ ದರವೂ ಏರಿಕೆಯಾಗಿತ್ತು. ಅದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಈಗ ಕಾವೇರಿ ನೀರಿನ ದರವನ್ನೂ ಪ್ರತೀ ಲೀಟರ್ ಗೆ 1 ಪೈಸೆಯಂತೆ ಏರಿಕೆ ಮಾಡಲಾಗಿದೆ. ಇದರಿಂದ ಕಾವೇರಿ ನೀರಿನ ದರ ಈಗ ಪಾವತಿಸುವುದಕ್ಕಿಂತ 10-15% ಹೆಚ್ಚು ಶುಲ್ಕ ಪಾವತಿಸಬೇಕಾಗಿದೆ. ಇದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮಗೆ ವೋಟ್ ಹಾಕಿದ್ದಕ್ಕೆ ನಾವು ಅನುಭವಿಸಬೇಕಾಗಿದೆ. ನಿಮ್ಮ ಗ್ಯಾರಂಟಿ ಯೋಜನೆಗಳಿಗಾಗಿ ಇನ್ನೂ ಎಲ್ಲೆಲ್ಲಿ ಕಿತ್ಕೊಳ್ಳಲು ಸಾಧ್ಯವೋ ಅಲ್ಲೆಲ್ಲಾ ಕಿತ್ಕೊಳ್ಳಿ. ನಾಚಿಕೆಯಾಗಬೇಕು ಎಂದು ಜನ ಸರ್ಕಾರಕ್ಕೆ ಹಿಡಿ ಶಾಪ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments